‘ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ, ಲೋಕೋಪಯೋಗಿ, ಜಲಸಂಪನ್ಮೂಲ, ನಗರಾಭಿವೃದ್ಧಿ ಇಲಾಖೆಗಳಿಗೆ ಮಂಜೂರು ಮಾಡಿದ್ದ ಅನುದಾನವನ್ನು ತಡೆ ಹಿಡಿಯಲಾಗಿದೆ. ಆರ್ಥಿಕ ಬಿಕ್ಕಟ್ಟು ಎಂಬ ಕಾರಣ ನೀಡಲಾಗಿದೆ. ಆದರೆ, ಬಿಜೆಪಿ ಶಾಸಕರ ಕ್ಷೇತ್ರಗಳಿಗೆ ಅನುದಾನದ ಹೊಳೆ ಹರಿಸಲಾಗಿದೆ. ಕಾಂಗ್ರೆಸ್–ಜೆಡಿಎಸ್ ಶಾಸಕರ ಕ್ಷೇತ್ರಗಳಿಗೆ ಅನುದಾನ ನೀಡುವುದಿಲ್ಲ ಎಂದು ಸರ್ಕಾರ ಘೋಷಣೆ ಮಾಡಲಿ. ನಾವು ಮತ್ತೆ ಸರ್ಕಾರವನ್ನು ಪ್ರಶ್ನಿಸುವುದಿಲ್ಲ’ ಎಂದು ವ್ಯಂಗ್ಯವಾಗಿ ಹೇಳಿದರು.