<p><strong>ಪೀಣ್ಯ–ದಾಸರಹಳ್ಳಿ:</strong> ಮತದಾರರಿಗೆ ಹಂಚಲು ಸಾಗಿಸುತ್ತಿದ್ದ ₹ 8.50 ಲಕ್ಷ ಮೌಲ್ಯದ 500ಕ್ಕೂ ಹೆಚ್ಚು ಕುಕ್ಕರ್ ಹಾಗೂ ಇತರೆ ಗೃಹೋಪಯೋಗಿ ವಸ್ತುಗಳನ್ನು ಚುನಾವಣಾಧಿಕಾರಿಗಳು ಜಪ್ತಿ ಮಾಡಿದ್ದಾರೆ.</p>.<p>‘ಲೋಕೇಶ್ ಕಾರ್ಗೊ ಮೂವರ್ಸ್ ಕಂಪನಿಗೆ ಸೇರಿದ್ದ ಲಾರಿಯಲ್ಲಿ (ಕೆಎ 52 ಬಿ 5569) ಕುಕ್ಕರ್ ಹಾಗೂ ಗೃಹೋಪಯೋಗಿ ವಸ್ತುಗಳನ್ನು ಸಾಗಿಸಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ಬಂದಿತ್ತು. ರಾಜಗೋಪಾಲನಗರ ಠಾಣೆ ವ್ಯಾಪ್ತಿಯ ಬೃಂದಾವನ ತಂಗುದಾಣ ಬಳಿ ಲಾರಿ ತಡೆದು ಪರಿಶೀಲಿಸಿದಾಗ ವಸ್ತುಗಳು ಪತ್ತೆಯಾದವು’ ಎಂದು ಅಧಿಕಾರಿಗಳು ತಿಳಿಸಿದರು.</p>.<p>‘ಗ್ರೀನ್ ಷೆಫ್ ಕಂಪನಿಯ ಕುಕ್ಕರ್ಗಳ ಮೇಲೆ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಆರ್. ಮಂಜುನಾಥ್ ಭಾವಚಿತ್ರವಿರುವ ಸ್ಟಿಕ್ಕರ್ ಇದೆ. ಮತದಾರರಿಗೆ ಹಂಚಲೆಂದು ಇವುಗಳನ್ನು ಸಾಗಿಸುತ್ತಿದ್ದ ಅನುಮಾನವಿದೆ.’</p>.<p>‘ಲಾರಿ ಸಮೇತ ಎಲ್ಲ ಕುಕ್ಕರ್ ಜಪ್ತಿ ಮಾಡಲಾಗಿದೆ. ಅಕ್ರಮ ಸಾಗಣೆ ಬಗ್ಗೆ ರಾಜಗೋಪಾಲನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ’ ಎಂದು ಅಧಿಕಾರಿಗಳು ಹೇಳಿದರು.</p>.<p>ಕುಕ್ಕರ್ ಅಕ್ರಮ ಸಾಗಣೆ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ಮುಖಂಡ ಎಸ್. ಮುನಿರಾಜು, ‘ಮತದಾರರನ್ನು ಸೆಳೆಯುವ ಉದ್ದೇಶದಿಂದ ಶಾಸಕ ಆರ್. ಮಂಜುನಾಥ್ ಬೆಂಬಲಿಗರು ಕುಕ್ಕರ್ ಹಂಚುತ್ತಿದ್ದಾರೆ. ಇವರ ವಿರುದ್ಧ ಪ್ರಕರಣ ದಾಖಲಿಸಿ, ಬಂಧಿಸಬೇಕು’ ಎಂದು ಆಗ್ರಹಿಸಿದರು.</p>.<p>ಚುನಾವಣಾಧಿಕಾರಿಗಳ ದಾಳಿ ಬಗ್ಗೆ ಪ್ರತಿಕ್ರಿಯೆ ಪಡೆಯಲು ಆರ್. ಮಂಜುನಾಥ್ ಲಭ್ಯರಾಗಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೀಣ್ಯ–ದಾಸರಹಳ್ಳಿ:</strong> ಮತದಾರರಿಗೆ ಹಂಚಲು ಸಾಗಿಸುತ್ತಿದ್ದ ₹ 8.50 ಲಕ್ಷ ಮೌಲ್ಯದ 500ಕ್ಕೂ ಹೆಚ್ಚು ಕುಕ್ಕರ್ ಹಾಗೂ ಇತರೆ ಗೃಹೋಪಯೋಗಿ ವಸ್ತುಗಳನ್ನು ಚುನಾವಣಾಧಿಕಾರಿಗಳು ಜಪ್ತಿ ಮಾಡಿದ್ದಾರೆ.</p>.<p>‘ಲೋಕೇಶ್ ಕಾರ್ಗೊ ಮೂವರ್ಸ್ ಕಂಪನಿಗೆ ಸೇರಿದ್ದ ಲಾರಿಯಲ್ಲಿ (ಕೆಎ 52 ಬಿ 5569) ಕುಕ್ಕರ್ ಹಾಗೂ ಗೃಹೋಪಯೋಗಿ ವಸ್ತುಗಳನ್ನು ಸಾಗಿಸಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ಬಂದಿತ್ತು. ರಾಜಗೋಪಾಲನಗರ ಠಾಣೆ ವ್ಯಾಪ್ತಿಯ ಬೃಂದಾವನ ತಂಗುದಾಣ ಬಳಿ ಲಾರಿ ತಡೆದು ಪರಿಶೀಲಿಸಿದಾಗ ವಸ್ತುಗಳು ಪತ್ತೆಯಾದವು’ ಎಂದು ಅಧಿಕಾರಿಗಳು ತಿಳಿಸಿದರು.</p>.<p>‘ಗ್ರೀನ್ ಷೆಫ್ ಕಂಪನಿಯ ಕುಕ್ಕರ್ಗಳ ಮೇಲೆ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಆರ್. ಮಂಜುನಾಥ್ ಭಾವಚಿತ್ರವಿರುವ ಸ್ಟಿಕ್ಕರ್ ಇದೆ. ಮತದಾರರಿಗೆ ಹಂಚಲೆಂದು ಇವುಗಳನ್ನು ಸಾಗಿಸುತ್ತಿದ್ದ ಅನುಮಾನವಿದೆ.’</p>.<p>‘ಲಾರಿ ಸಮೇತ ಎಲ್ಲ ಕುಕ್ಕರ್ ಜಪ್ತಿ ಮಾಡಲಾಗಿದೆ. ಅಕ್ರಮ ಸಾಗಣೆ ಬಗ್ಗೆ ರಾಜಗೋಪಾಲನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ’ ಎಂದು ಅಧಿಕಾರಿಗಳು ಹೇಳಿದರು.</p>.<p>ಕುಕ್ಕರ್ ಅಕ್ರಮ ಸಾಗಣೆ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ಮುಖಂಡ ಎಸ್. ಮುನಿರಾಜು, ‘ಮತದಾರರನ್ನು ಸೆಳೆಯುವ ಉದ್ದೇಶದಿಂದ ಶಾಸಕ ಆರ್. ಮಂಜುನಾಥ್ ಬೆಂಬಲಿಗರು ಕುಕ್ಕರ್ ಹಂಚುತ್ತಿದ್ದಾರೆ. ಇವರ ವಿರುದ್ಧ ಪ್ರಕರಣ ದಾಖಲಿಸಿ, ಬಂಧಿಸಬೇಕು’ ಎಂದು ಆಗ್ರಹಿಸಿದರು.</p>.<p>ಚುನಾವಣಾಧಿಕಾರಿಗಳ ದಾಳಿ ಬಗ್ಗೆ ಪ್ರತಿಕ್ರಿಯೆ ಪಡೆಯಲು ಆರ್. ಮಂಜುನಾಥ್ ಲಭ್ಯರಾಗಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>