‘ಸರ್ಕಾರ ಹಾಗೂ ಇನ್ನಿತರ ಸಂಸ್ಥೆಗಳಿಂದ 500 ಎಕರೆ ಭೂಮಿ ಪಡೆದು, ಬಡವರಿಗಾಗಿ ಪ್ರಧಾನಮಂತ್ರಿಗಳ ಆಶಯದಂತೆ ಮನೆಗಳನ್ನು ನಿರ್ಮಿಸಲಾಗುತ್ತಿದೆ. ಗೋವಿಂದರಾಜ ನಗರ ಕ್ಷೇತ್ರದಲ್ಲಿರುವ ಬಡವರಿಗೆ ಉತ್ತಮ ಗುಣಮಟ್ಟದ ಆಹಾರ ಧಾನ್ಯಗಳನ್ನು ವಿತರಿಸಲಾಗುತ್ತಿದ್ದು, ಇನ್ನೂ 20 ದಿನಗಳವರೆಗೆ ಕ್ಷೇತ್ರದಲ್ಲಿ ದಿನಸಿ ವಿತರಣೆ ನಡೆಯಲಿದೆ’ ಎಂದರು.