ಟಿ.ಸಿ. ಪಾಳ್ಯ, ಮುಖ್ಯರಸ್ತೆ, ಮಾರತ್ತಹಳ್ಳಿ ಹೊರವರ್ತುಲ ರಸ್ತೆ, ಐಟಿಪಿಎಲ್ ಮುಖ್ಯರಸ್ತೆ, ವರ್ತೂರು ಸಿದ್ದಾಪುರ ಮುಖ್ಯರಸ್ತೆ, ವೈಟ್ಫೀಲ್ಡ್, ಇಮ್ಮಡಿಹಳ್ಳಿ, ಚನ್ನಸಂದ್ರ, ಕೆಪಿಟಿಒ, ಹಗದೂರು, ವೈದೇಹಿ ಮುಖ್ಯರಸ್ತೆಗಳ ಪಾದಚಾರಿ ಮಾರ್ಗದಲ್ಲಿ ಅನಧಿಕೃತವಾಗಿ ಅಂಗಡಿ ಮುಂಗಟ್ಟುಗಳನ್ನು ಇಟ್ಟುಕೊಂಡು ಪಾದಚಾರಿಗಳಿಗೆ ತೊಂದರೆ ನೀಡಲಾಗುತ್ತಿತ್ತು. ವಿಶೇಷ ಕಾರ್ಯಾಚರಣೆ ನಡೆಸಿ ಬಿಲ್ಬೋರ್ಡ್ ಹಾಗೂ ಅಂಗಡಿ ಮುಂಗಟ್ಟುಗಳನ್ನು ತೆರವು ಮಾಡಲಾಯಿತು ಎಂದು ಸಂಚಾರ ಪೊಲೀಸರು ಹೇಳಿದರು.