<p><strong>ಬೆಂಗಳೂರು: </strong>ಕೇಂದ್ರ ಸರ್ಕಾರ ರದ್ದು ಮಾಡಿರುವ ಹಳೇ ನೋಟುಗಳನ್ನು ಬದಲಾವಣೆ ಮಾಡಿಸಿ ಹೊಸ ನೋಟು ನೀಡುವುದಾಗಿ ಹೇಳಿ ವಂಚಿಸುವ ಜಾಲಗಳು ನಗರದಲ್ಲಿ ಅವ್ಯಾಹತವಾಗಿದ್ದು, ಇಂಥ ಜಾಲವೊಂದನ್ನು ಗೋವಿಂದಪುರ ಪೊಲೀಸರು ಭೇದಿಸಿದ್ದಾರೆ.</p>.<p>‘ಎಚ್ಬಿಆರ್ ಬಡಾವಣೆ ಬಳಿಯ ಪೆಟ್ರೋಲ್ ಬಂಕ್ ಬಳಿ ಕಾರ್ಯಾಚರಣೆ ನಡೆಸಿ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಅವರಿಂದ ₹ 80 ಲಕ್ಷ ಮೊತ್ತದ ಹಳೇ ನೋಟುಗಳು ಹಾಗೂ ₹ 5 ಕೋಟಿ ಮೊತ್ತದ ಕಲರ್ ಜೆರಾಕ್ಸ್ ನೋಟುಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಪೂರ್ವ ವಿಭಾಗದ ಡಿಸಿಪಿ ಎಸ್.ಡಿ.ಶರಣಪ್ಪ ಹೇಳಿದರು.</p>.<p>‘ಕೆ.ಆರ್.ಪುರದ ಸುರೇಶ್ಕುಮಾರ್, ರಾಜಾಜಿನಗರದ ರಾಮಕೃಷ್ಣ, ಆನೇಕಲ್ನ ಮಂಜುನಾಥ್, ಹೊಂಗಸಂದ್ರದ ವೆಂಕಟೇಶ್, ದೇವಾನಂದ ಬಂಧಿತರು' ಎಂದೂ ತಿಳಿಸಿದರು. ‘₹ 500 ಹಾಗೂ ₹ 1,000 ಮುಖಬೆಲೆಯ ಹಳೇ ನೋಟುಗಳನ್ನು ಕಲರ್ ಜೆರಾಕ್ಸ್ ಮಾಡಿಸುತ್ತಿದ್ದ ಆರೋಪಿಗಳು, ಕಂತೆಗಳನ್ನಾಗಿ ಮಾಡುತ್ತಿದ್ದರು. ಕಂತೆಯ ಮೇಲೆ ಹಾಗೂ ಕೊನೆಯಲ್ಲಿ ಮಾತ್ರ ಅಸಲಿ ನೋಟುಗಳನ್ನು ಇರಿಸುತ್ತಿದ್ದರು. ಇಂಥ ಕಂತೆಗಳನ್ನೇ ಕೇರಳದ ಬೇನೂರು– ಕುಂದಡುಕ್ಕಂ ರಸ್ತೆಯಲ್ಲಿರುವ ಫಾರ್ಮ್ಹೌಸ್ನಲ್ಲಿ ಇರಿಸಿದ್ದರು.</p>.<p>ಹಳೇ ನೋಟು ವರ್ಗಾವಣೆ ದಂಧೆ ಮಾಡುತ್ತಿರುವುದಾಗಿ ಹೇಳಿ ಕೆಲ ಉದ್ಯಮಿಗಳನ್ನು ಸಂಪರ್ಕಿಸುತ್ತಿದ್ದ ಆರೋಪಿಗಳು, ಅವರನ್ನು ಫಾರ್ಮ್ ಹೌಸ್ಗೆ ಕರೆತಂದು ಕಂತೆಗಳನ್ನು ತೋರಿಸುತ್ತಿದ್ದರು.’ ‘ಹಳೇ ನೋಟುಗಳನ್ನು ತೋರಿಸಿ ಕಮಿಷನ್ ಹೆಸರಿನಲ್ಲಿ ಹೊಸ ನೋಟುಗಳನ್ನು ಪಡೆದುಕೊಂಡು ವಂಚಿಸುವುದು ಆರೋಪಿಗಳ ಉದ್ದೇಶವಾಗಿತ್ತು’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕೇಂದ್ರ ಸರ್ಕಾರ ರದ್ದು ಮಾಡಿರುವ ಹಳೇ ನೋಟುಗಳನ್ನು ಬದಲಾವಣೆ ಮಾಡಿಸಿ ಹೊಸ ನೋಟು ನೀಡುವುದಾಗಿ ಹೇಳಿ ವಂಚಿಸುವ ಜಾಲಗಳು ನಗರದಲ್ಲಿ ಅವ್ಯಾಹತವಾಗಿದ್ದು, ಇಂಥ ಜಾಲವೊಂದನ್ನು ಗೋವಿಂದಪುರ ಪೊಲೀಸರು ಭೇದಿಸಿದ್ದಾರೆ.</p>.<p>‘ಎಚ್ಬಿಆರ್ ಬಡಾವಣೆ ಬಳಿಯ ಪೆಟ್ರೋಲ್ ಬಂಕ್ ಬಳಿ ಕಾರ್ಯಾಚರಣೆ ನಡೆಸಿ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಅವರಿಂದ ₹ 80 ಲಕ್ಷ ಮೊತ್ತದ ಹಳೇ ನೋಟುಗಳು ಹಾಗೂ ₹ 5 ಕೋಟಿ ಮೊತ್ತದ ಕಲರ್ ಜೆರಾಕ್ಸ್ ನೋಟುಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಪೂರ್ವ ವಿಭಾಗದ ಡಿಸಿಪಿ ಎಸ್.ಡಿ.ಶರಣಪ್ಪ ಹೇಳಿದರು.</p>.<p>‘ಕೆ.ಆರ್.ಪುರದ ಸುರೇಶ್ಕುಮಾರ್, ರಾಜಾಜಿನಗರದ ರಾಮಕೃಷ್ಣ, ಆನೇಕಲ್ನ ಮಂಜುನಾಥ್, ಹೊಂಗಸಂದ್ರದ ವೆಂಕಟೇಶ್, ದೇವಾನಂದ ಬಂಧಿತರು' ಎಂದೂ ತಿಳಿಸಿದರು. ‘₹ 500 ಹಾಗೂ ₹ 1,000 ಮುಖಬೆಲೆಯ ಹಳೇ ನೋಟುಗಳನ್ನು ಕಲರ್ ಜೆರಾಕ್ಸ್ ಮಾಡಿಸುತ್ತಿದ್ದ ಆರೋಪಿಗಳು, ಕಂತೆಗಳನ್ನಾಗಿ ಮಾಡುತ್ತಿದ್ದರು. ಕಂತೆಯ ಮೇಲೆ ಹಾಗೂ ಕೊನೆಯಲ್ಲಿ ಮಾತ್ರ ಅಸಲಿ ನೋಟುಗಳನ್ನು ಇರಿಸುತ್ತಿದ್ದರು. ಇಂಥ ಕಂತೆಗಳನ್ನೇ ಕೇರಳದ ಬೇನೂರು– ಕುಂದಡುಕ್ಕಂ ರಸ್ತೆಯಲ್ಲಿರುವ ಫಾರ್ಮ್ಹೌಸ್ನಲ್ಲಿ ಇರಿಸಿದ್ದರು.</p>.<p>ಹಳೇ ನೋಟು ವರ್ಗಾವಣೆ ದಂಧೆ ಮಾಡುತ್ತಿರುವುದಾಗಿ ಹೇಳಿ ಕೆಲ ಉದ್ಯಮಿಗಳನ್ನು ಸಂಪರ್ಕಿಸುತ್ತಿದ್ದ ಆರೋಪಿಗಳು, ಅವರನ್ನು ಫಾರ್ಮ್ ಹೌಸ್ಗೆ ಕರೆತಂದು ಕಂತೆಗಳನ್ನು ತೋರಿಸುತ್ತಿದ್ದರು.’ ‘ಹಳೇ ನೋಟುಗಳನ್ನು ತೋರಿಸಿ ಕಮಿಷನ್ ಹೆಸರಿನಲ್ಲಿ ಹೊಸ ನೋಟುಗಳನ್ನು ಪಡೆದುಕೊಂಡು ವಂಚಿಸುವುದು ಆರೋಪಿಗಳ ಉದ್ದೇಶವಾಗಿತ್ತು’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>