ಯಾರಿಗೆ ಅರ್ಹತೆ ಇಲ್ಲವೋ ಅವರ ಬಳಿ ಇದ್ದ ಬಿಪಿಎಲ್ ಕಾರ್ಡ್ಗಳನ್ನು ಪತ್ತೆ ಮಾಡಿ ಒಟ್ಟು 3.20 ಲಕ್ಷ ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡಿದ್ದೇವೆ. ಈಗ 4.1 ಕೋಟಿ ಬಿಪಿಎಲ್ ಕಾರ್ಡುದಾರರಿಗೆ ತಲಾ 12 ಕೆ.ಜಿ ಅಕ್ಕಿ, ಜೋಳ ಅಥವಾ ರಾಗಿಯನ್ನು ನೀಡಲಾಗುತ್ತಿದೆ. ಕೋವಿಡ್ ವೇಳೆ ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ‘ಗರೀಬ್ ಕಲ್ಯಾಣ್’ ಯೋಜನೆ ಸೆಪ್ಟೆಂಬರ್ನಲ್ಲಿ ಕೊನೆಗೊಳ್ಳುತ್ತದೆ. ಆ ಬಳಿಕ ರಾಜ್ಯ ಸರ್ಕಾರದಿಂದ ಈ ಹಿಂದೆ ನೀಡುತ್ತಿದ್ದ ಪ್ರಮಾಣದಷ್ಟೇ ಅಕ್ಕಿ, ಜೋಳ ಅಥವಾ ರಾಗಿ ವಿತರಿಸಲಾಗುವುದು ಎಂದರು.