ವೀರಲೋಕ ಪ್ರಕಾಶನವು ನಗರ ದಲ್ಲಿ ಮಂಗಳವಾರ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ವಿವಿಧ ಲೇಖಕರ 10 ಪುಸ್ತಕಗಳನ್ನು ಬಿಡುಗಡೆ ಮಾಡಿ, ಮಾತನಾಡಿದರು. ‘ಬದಲಾದ ಜೀವನ ಶೈಲಿ, ಧೂಮಪಾನ, ಮದ್ಯಪಾನದಂತಹ ವ್ಯಸನ ಸೇರಿ ವಿವಿಧ ಕಾರಣಗಳಿಂದ 50 ವರ್ಷದೊಳಗಿನವರೂ ಹೆಚ್ಚಿನ ಸಂಖ್ಯೆಯಲ್ಲಿ ಹೃದಯಾಘಾತಕ್ಕೆ ಒಳಗಾಗುತ್ತಿದ್ದಾರೆ.15 ವರ್ಷದ ಬಾಲಕ, 19 ವರ್ಷದ ಯುವಕನಿಗೂ ಹೃದಯಾಘಾತಕ್ಕೆ ಚಿಕಿತ್ಸೆ ನೀಡಲಾಗಿದೆ. ಇದು ಆತಂಕಕಾರಿ ಸಂಗತಿಯೂ ಆಗಿದೆ.ಹೃದಯವನ್ನು ಔಷಧಗಳಿಂದ ಕಾಪಾಡಿ ಕೊಳ್ಳಲು ಸಾಧ್ಯವಿಲ್ಲ’ ಎಂದು ಹೇಳಿದರು.