‘2012ರಲ್ಲಿ ನಡೆದ ಹೂಡಿಕೆದಾರರ ಸಮಾವೇಶದಲ್ಲಿ ಮಾಡಿಕೊಳ್ಳಲಾದ ಒಪ್ಪಂದಗಳಲ್ಲಿ ಶೇ 27ರಷ್ಟು ಯೋಜನೆ ಗಳು ಮಾತ್ರ ಅನುಷ್ಠಾನಗೊಂಡಿದ್ದವು. ಆದರೆ, ಈ ಬಾರಿ ಶೇ 75ಕ್ಕೂ ಹೆಚ್ಚು ಯೋಜನೆಗಳು ಅನುಷ್ಠಾನಗೊಳ್ಳಲಿವೆ. ಕೇವಲ ಒಪ್ಪಂದಕ್ಕೆ ಮಾತ್ರ ಯೋಜನೆಗಳು ಸೀಮಿತವಾಗಿರುವುದಿಲ್ಲ’ ಎಂದುಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಮುರುಗೇಶ ನಿರಾಣಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.