ಬೆಂಗಳೂರು: ಕೆಂಗೇರಿ ಠಾಣೆ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನ ಕಳವು ಮಾಡಿದ್ದ ಆರೋಪದಡಿ ಕೌಶಿಕ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
‘ಸ್ಥಳೀಯ ನಿವಾಸಿಯಾದ ಕೌಶಿಕ್, ಹಲವು ತಿಂಗಳಿನಿಂದ ಕೃತ್ಯ ಎಸಗುತ್ತಿದ್ದ. ಆತನಿಂದ ₹ 2.91 ಲಕ್ಷ ಮೌಲ್ಯದ 4 ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.
‘ಠಾಣೆ ವ್ಯಾಪ್ತಿಯ ನಿವಾಸಿಯೊಬ್ಬರು ಅ. 8ರಂದು ರಾತ್ರಿ ಮನೆ ಮುಂದೆ ದ್ವಿಚಕ್ರ ವಾಹನ ನಿಲ್ಲಿಸಿದ್ದರು. ಮರುದಿನ ಬೆಳಿಗ್ಗೆ ನೋಡಿದಾಗ ದ್ವಿಚಕ್ರ ವಾಹನ ಇರಲಿಲ್ಲ. ಕಳ್ಳತನವಾದ ಬಗ್ಗೆ ದೂರು ನೀಡಿದ್ದರು.’
‘ಪುರಾವೆಗಳನ್ನು ಸಂಗ್ರಹಿಸಿ ಆರೋಪಿ ಕೌಶಿಕ್ನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ತಪ್ಪೊಪ್ಪಿಕೊಂಡ. ಬ್ಯಾಟರಾಯನಪುರ ಹಾಗೂ ಬಾಗಲೂರು ಠಾಣೆ ವ್ಯಾಪ್ತಿಯಲ್ಲೂ ಆತ ಕೃತ್ಯ ಎಸಗಿದ್ದು ತನಿಖೆಯಿಂದ ಗೊತ್ತಾಗಿದೆ’ ಎಂದೂ ಮೂಲಗಳು ತಿಳಿಸಿವೆ.