<p><strong>ಬೆಂಗಳೂರು:</strong> ಗಿರಿನಗರ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ಮಗುವನ್ನು ಕೂಡಿಹಾಕಿ ಹಲ್ಲೆ ಮಾಡಲಾಗಿದ್ದು, ಸ್ಥಳೀಯರು ಮಗುವನ್ನು ರಕ್ಷಿಸಿದ್ದಾರೆ.</p>.<p>‘ಎರಡೂವರೆ ವರ್ಷದ ಮಗುವಿನ ಮೇಲೆ ತಾಯಿ ಹಲ್ಲೆ ಮಾಡಿದ್ದಾರೆ. ಮಗುವಿನ ಕೂಗಾಟ ಕೇಳಿ ಸ್ಥಳಕ್ಕೆ ಹೋದಾಗ ವಿಷಯ ಗೊತ್ತಾಯಿತು. ಸಂಘಟನೆಯೊಂದರ ನೆರವಿನಿಂದ ಮಗುವನ್ನು ರಕ್ಷಿಸಲಾಗಿದೆ’ ಎಂದು ಸ್ಥಳೀಯರೊಬ್ಬರು ಹೇಳಿದರು.</p>.<p>‘ಪತಿಗೆ ವಿಚ್ಛೇದನ ನೀಡಿರುವ ಮಹಿಳೆ, ಮಗುವಿನ ಜೊತೆ ವಾಸವಿದ್ದಾರೆ. ಸ್ನೇಹಿತರೊಬ್ಬರ ಜೊತೆ ಸಲುಗೆ ಹೊಂದಿದ್ದಾರೆ. ಮನೆಯಲ್ಲಿ ಮಗುವಿನ ಮೇಲೆ ತಾಯಿ ಹಾಗೂ ಸ್ನೇಹಿತ, ಹಲವು ಬಾರಿ ಹಲ್ಲೆ ಮಾಡಿದ್ದಾರೆ. ಇಬ್ಬರೂ ಹೊರಗೆ ಹೋಗುವಾಗ ಮನೆಯಲ್ಲಿಯೇ ಮಗುವನ್ನು ಕೂಡಿ ಹಾಕುತ್ತಿದ್ದರು’ ಎಂದು ತಿಳಿಸಿದರು.</p>.<p>‘ತಾಯಿ ಬೆಳಿಗ್ಗೆ ಕೆಲಸಕ್ಕೆ ಹೋಗಿ ಮನೆಗೆ ರಾತ್ರಿ ವಾಪಸು ಬರುತ್ತಿದ್ದರು. ಅಲ್ಲಿಯವರೆಗೂ ಮಗು ಮನೆಯೊಳಗೆ ಇರುತ್ತಿತ್ತು. ಕಿಟಕಿ ಬಳಿ ನಿಂತು ಅಳುತ್ತಿತ್ತು’ ಎಂದರು.</p>.<p>‘ಮಗುವಿನ ಮೇಲಿನ ಹಲ್ಲೆಯನ್ನು ಸಮರ್ಥಿಸಿಕೊಂಡಿರುವ ತಾಯಿ, ‘ಪತಿಗೆ ವಿಚ್ಛೇದನ ನೀಡಿ, ಕಷ್ಟದಲ್ಲಿ ಜೀವನ ಸಾಗಿಸುತ್ತಿದ್ದೇನೆ. ಮಗುವಿಗೆ ಜೀವನ ಪಾಠ ತಿಳಿಯಲೆಂದು ಈ ರೀತಿ ಮಾಡಿದೆ’ ಎನ್ನುತ್ತಿದ್ದಾರೆ’ ಎಂದು ಸ್ಥಳೀಯರೊಬ್ಬರು ವಿವರಿಸಿದರು.</p>.<p>ಮಗುವಿನ ಮೇಲಿನ ಹಲ್ಲೆ ಬಗ್ಗೆ ಪೊಲೀಸ್ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಗಿರಿನಗರ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ಮಗುವನ್ನು ಕೂಡಿಹಾಕಿ ಹಲ್ಲೆ ಮಾಡಲಾಗಿದ್ದು, ಸ್ಥಳೀಯರು ಮಗುವನ್ನು ರಕ್ಷಿಸಿದ್ದಾರೆ.</p>.<p>‘ಎರಡೂವರೆ ವರ್ಷದ ಮಗುವಿನ ಮೇಲೆ ತಾಯಿ ಹಲ್ಲೆ ಮಾಡಿದ್ದಾರೆ. ಮಗುವಿನ ಕೂಗಾಟ ಕೇಳಿ ಸ್ಥಳಕ್ಕೆ ಹೋದಾಗ ವಿಷಯ ಗೊತ್ತಾಯಿತು. ಸಂಘಟನೆಯೊಂದರ ನೆರವಿನಿಂದ ಮಗುವನ್ನು ರಕ್ಷಿಸಲಾಗಿದೆ’ ಎಂದು ಸ್ಥಳೀಯರೊಬ್ಬರು ಹೇಳಿದರು.</p>.<p>‘ಪತಿಗೆ ವಿಚ್ಛೇದನ ನೀಡಿರುವ ಮಹಿಳೆ, ಮಗುವಿನ ಜೊತೆ ವಾಸವಿದ್ದಾರೆ. ಸ್ನೇಹಿತರೊಬ್ಬರ ಜೊತೆ ಸಲುಗೆ ಹೊಂದಿದ್ದಾರೆ. ಮನೆಯಲ್ಲಿ ಮಗುವಿನ ಮೇಲೆ ತಾಯಿ ಹಾಗೂ ಸ್ನೇಹಿತ, ಹಲವು ಬಾರಿ ಹಲ್ಲೆ ಮಾಡಿದ್ದಾರೆ. ಇಬ್ಬರೂ ಹೊರಗೆ ಹೋಗುವಾಗ ಮನೆಯಲ್ಲಿಯೇ ಮಗುವನ್ನು ಕೂಡಿ ಹಾಕುತ್ತಿದ್ದರು’ ಎಂದು ತಿಳಿಸಿದರು.</p>.<p>‘ತಾಯಿ ಬೆಳಿಗ್ಗೆ ಕೆಲಸಕ್ಕೆ ಹೋಗಿ ಮನೆಗೆ ರಾತ್ರಿ ವಾಪಸು ಬರುತ್ತಿದ್ದರು. ಅಲ್ಲಿಯವರೆಗೂ ಮಗು ಮನೆಯೊಳಗೆ ಇರುತ್ತಿತ್ತು. ಕಿಟಕಿ ಬಳಿ ನಿಂತು ಅಳುತ್ತಿತ್ತು’ ಎಂದರು.</p>.<p>‘ಮಗುವಿನ ಮೇಲಿನ ಹಲ್ಲೆಯನ್ನು ಸಮರ್ಥಿಸಿಕೊಂಡಿರುವ ತಾಯಿ, ‘ಪತಿಗೆ ವಿಚ್ಛೇದನ ನೀಡಿ, ಕಷ್ಟದಲ್ಲಿ ಜೀವನ ಸಾಗಿಸುತ್ತಿದ್ದೇನೆ. ಮಗುವಿಗೆ ಜೀವನ ಪಾಠ ತಿಳಿಯಲೆಂದು ಈ ರೀತಿ ಮಾಡಿದೆ’ ಎನ್ನುತ್ತಿದ್ದಾರೆ’ ಎಂದು ಸ್ಥಳೀಯರೊಬ್ಬರು ವಿವರಿಸಿದರು.</p>.<p>ಮಗುವಿನ ಮೇಲಿನ ಹಲ್ಲೆ ಬಗ್ಗೆ ಪೊಲೀಸ್ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>