ಬಳಿಕ ಮಾತನಾಡಿದಚಂದ್ರ ಆರ್ಯ, ‘ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆಯುತ್ತಿರುವ ಎಲ್ಲ ಕಾರ್ಯಚಟುವಟಿಕೆಗಳು ಕನ್ನಡ-ಕನ್ನಡಿಗ-ಕರ್ನಾಟಕವನ್ನು ಗಟ್ಟಿಗೊಳಿಸುವಂತಹದ್ದಾಗಿದೆ. ತಂದೆಯವರು ಸರ್ಕಾರಿ ಸೇವೆಯಲ್ಲಿದ್ದಾಗ ಕನ್ನಡವನ್ನು ಆಡಳಿತ ಭಾಷೆಯನ್ನಾಗಿ ರೂಪಿಸುವಲ್ಲಿ ಕಾರ್ಯಯೋಜನೆ ಕೈಗೊಂಡಿದ್ದರು. ಕೆನಡಾದಲ್ಲಿರುವ ಕನ್ನಡಿಗರನ್ನು ಒಟ್ಟುಗೂಡಿಸಿ, ಪರಿಷತ್ತಿನ ಘಟಕವನ್ನು ರಚಿಸಿ, ಅದನ್ನು ಮುನ್ನಡೆಸುವ ಮಹತ್ವದ ಜವಾಬ್ದಾರಿಯನ್ನು ಮಹೇಶ ಜೋಶಿ ನೀಡಿದ್ದಾರೆ. ಇದನ್ನುನನ್ನ ಕರ್ತವ್ಯ ಎಂದು ನಿಭಾಯಿಸುತ್ತೇನೆ’ ಎಂದು ತಿಳಿಸಿದರು.