ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಬಿ.ವಿ. ವಸಂತಕುಮಾರ್, ‘ಕನ್ನಡ ಕಟ್ಟುವುದು ಎಂದರೆ ಕನ್ನಡದ ಬೀಜಗಳನ್ನು ಮಕ್ಕಳ ಎದೆಯಲ್ಲಿ, ಭೂಮಿಯಲ್ಲಿ ಬಿತ್ತಬೇಕು. ಭಾರತೀಯತೆಗೆ ಭಂಗ ಬಾರದಂತೆ, ಸಿದ್ಧಾಂತ ಮತ್ತು ರಾಜಕೀಯ ಪಕ್ಷಗಳನ್ನು ಮೀರಿ ಶಿಕ್ಷಣದಲ್ಲಿ ಕನ್ನಡವನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವ ಕೆಲಸ ಆಗಬೇಕು’ ಎಂದರು.