‘ಸಂಚಾರ ನಿಯಮ ಉಲ್ಲಂಘಿಸುವವರಿಗೆ ವಿಧಿಸುವ ದಂಡದ ಮೊತ್ತವನ್ನು ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಹೆಚ್ಚಳ ಮಾಡಲಾಗಿದೆ. ಇದರಲ್ಲಿ ಹಲವರ ಲಾಭವೂ ಅಡಗಿದೆ. ಇದರ ಪರಿಣಾಮ, ದುಬಾರಿ ದಂಡ ಪಾವತಿಸಲಾಗದೇ ಜನರು ತೊಂದರೆಗೆ ಸಿಲುಕುತ್ತಿದ್ದಾರೆ. ಸರ್ಕಾರದ ನಡೆಯನ್ನು ಪ್ರಶ್ನಿಸಿ ಸಾಂಕೇತಿಕ ಪ್ರತಿಭಟನೆ ನಡೆಸುತ್ತಿದ್ದೇವೆ. ಇದಕ್ಕೆ ಸ್ಪಂದಿಸದಿದ್ದರೆ, ಮುಂದಿನ ದಿನಗಳಲ್ಲಿ ಗಂಭೀರ ಸ್ವರೂಪದ ಹೋರಾಟ ನಡೆಸಲಾಗುವುದು’ ಎಂದು ವಕೀಲರು ಎಚ್ಚರಿಸಿದರು.