<p><strong>ಬೆಂಗಳೂರು:</strong> ‘ರೈತರ ಸಾಲ ಮನ್ನಾ ಮಾಡಿ ಋಣಮುಕ್ತರನ್ನಾಗಿ ಮಾಡುವ ಬದಲಿಗೆ ಅವರನ್ನು ಸುಸ್ಥಿರ ಮತ್ತು ಆರ್ಥಿಕವಾಗಿ ಸದೃಢ ಕೃಷಿಕರನ್ನಾಗಿ ರೂಪಿಸುವ ಅಗತ್ಯವಿದೆ’ ಎಂದು ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಅಭಿಪ್ರಾಯಪಟ್ಟರು.</p>.<p>ಮಂಗಳವಾರ ನಗರದಲ್ಲಿ ನಡೆದ ಹೈಡ್ರೊಪೊನಿಕ್ (ಮಣ್ಣು ರಹಿತ ಜಲಕೃಷಿ ಪದ್ಧತಿ) ತಂತ್ರಜ್ಞಾನಕ್ಕೆ ಸಂಬಂಧಿಸಿದಂತೆ ನಗರದ ’ಫಾರ್ಮ್ಸ್–2015 ಮತ್ತು ಅಮೆರಿಕದ ಆ್ಯಮ್ಹೈಡ್ರೊ’ ಕಂಪನಿಗಳ ನಡುವೆ ಒಪ್ಪಂದಕ್ಕೆ ಸಹಿ ಹಾಕುವ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.</p>.<p>‘ದಿನೇ ದಿನೇ ಕೃಷಿಭೂಮಿ ಸಂಕುಚಿತವಾಗುತ್ತಿದ್ದು, ಭವಿಷ್ಯದಲ್ಲಿ ಊರ್ಧ್ವಮುಖಿ ಕೃಷಿಯತ್ತ ಗಮನ ಹರಿಸುವ ಅಗತ್ಯವಿದೆ. ನಗರೀಕರಣ ಹೆಚ್ಚಾಗುತ್ತಿರುವ ಈ ದಿನಗಳಲ್ಲಿ ಹೈಡ್ರೊಪೊನಿಕ್ ಕೃಷಿ ತಂತ್ರಜ್ಞಾನ ರೈತರ ಪಾಲಿನ ಆಶಾಕಿರಣವಾಗಿದೆ’ ಎಂದರು.</p>.<p>ಕೃಷಿ ಸಚಿವ ಎನ್.ಎಚ್. ಶಿವಶಂಕರ ರೆಡ್ಡಿ ಮಾತನಾಡಿ, ‘ಕಡಿಮೆ ಸಂಪನ್ಮೂಲದ ಸೂಕ್ಷ್ಮ ಕೃಷಿ ಪದ್ಧತಿ ವೇಗವಾಗಿ ಬೆಳೆಯುತ್ತಿರುವ ಈ ಸಂದರ್ಭದಲ್ಲಿ ರಾಜ್ಯದಲ್ಲಿಯೂ ಹೈಡ್ರೊಪೊನಿಕ್ ಕೃಷಿ ಉತ್ತೇಜಿಸುವ ಅಗತ್ಯವಿದೆ’ ಎಂದರು.</p>.<p>ಫಾರ್ಮ್ಸ್–2050 ಕಂಪನಿಯ ಮುಖ್ಯಸ್ಥರಾದ ಬಿ.ಎಂ. ಪಾಟೀಲ ಅವರು, ‘ಮಧ್ಯಮ ವರ್ಗದ ಕೃಷಿಕರು ಆಧುನಿಕ ತಂತ್ರಜ್ಞಾನವನ್ನು ಸರಳವಾಗಿ ಬಳಸಿಕೊಳ್ಳುವತ್ತ ಮುಖ ಮಾಡಬೇಕು. ಭವಿಷ್ಯದಲ್ಲಿ ಎದುರಾಗಲಿರುವ ನೀರಿನ ಅಭಾವದಲ್ಲಿ, ಸುಲಭ ವಿಧಾನಗಳ ಮೂಲಕ ಹೇಗೆ ಕೃಷಿ ಮಾಡಬೇಕು ಎಂಬುದರತ್ತ ಹೆಚ್ಚಿನ ಗಮನ ಹರಿಸಬೇಕು’ ಎಂದರು.</p>.<p>ಆ್ಯಮ್ಹೈಡ್ರೊ ಕಂಪನಿಯ ಮುಖ್ಯ ಕಾರ್ಯನಿರ್ವಾಹಕಿ ಜೆನ್ನಿ ಹ್ಯಾರಿಸ್ ಮತ್ತು ತಾಂತ್ರಿಕ ನಿರ್ದೇಶಕ ಜೋ ಸ್ವಾರ್ಟ್ಸ್ ಪ್ರಶ್ನೋತ್ತರ ಸಂವಾದ ನಡೆಸಿಕೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ರೈತರ ಸಾಲ ಮನ್ನಾ ಮಾಡಿ ಋಣಮುಕ್ತರನ್ನಾಗಿ ಮಾಡುವ ಬದಲಿಗೆ ಅವರನ್ನು ಸುಸ್ಥಿರ ಮತ್ತು ಆರ್ಥಿಕವಾಗಿ ಸದೃಢ ಕೃಷಿಕರನ್ನಾಗಿ ರೂಪಿಸುವ ಅಗತ್ಯವಿದೆ’ ಎಂದು ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಅಭಿಪ್ರಾಯಪಟ್ಟರು.</p>.<p>ಮಂಗಳವಾರ ನಗರದಲ್ಲಿ ನಡೆದ ಹೈಡ್ರೊಪೊನಿಕ್ (ಮಣ್ಣು ರಹಿತ ಜಲಕೃಷಿ ಪದ್ಧತಿ) ತಂತ್ರಜ್ಞಾನಕ್ಕೆ ಸಂಬಂಧಿಸಿದಂತೆ ನಗರದ ’ಫಾರ್ಮ್ಸ್–2015 ಮತ್ತು ಅಮೆರಿಕದ ಆ್ಯಮ್ಹೈಡ್ರೊ’ ಕಂಪನಿಗಳ ನಡುವೆ ಒಪ್ಪಂದಕ್ಕೆ ಸಹಿ ಹಾಕುವ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.</p>.<p>‘ದಿನೇ ದಿನೇ ಕೃಷಿಭೂಮಿ ಸಂಕುಚಿತವಾಗುತ್ತಿದ್ದು, ಭವಿಷ್ಯದಲ್ಲಿ ಊರ್ಧ್ವಮುಖಿ ಕೃಷಿಯತ್ತ ಗಮನ ಹರಿಸುವ ಅಗತ್ಯವಿದೆ. ನಗರೀಕರಣ ಹೆಚ್ಚಾಗುತ್ತಿರುವ ಈ ದಿನಗಳಲ್ಲಿ ಹೈಡ್ರೊಪೊನಿಕ್ ಕೃಷಿ ತಂತ್ರಜ್ಞಾನ ರೈತರ ಪಾಲಿನ ಆಶಾಕಿರಣವಾಗಿದೆ’ ಎಂದರು.</p>.<p>ಕೃಷಿ ಸಚಿವ ಎನ್.ಎಚ್. ಶಿವಶಂಕರ ರೆಡ್ಡಿ ಮಾತನಾಡಿ, ‘ಕಡಿಮೆ ಸಂಪನ್ಮೂಲದ ಸೂಕ್ಷ್ಮ ಕೃಷಿ ಪದ್ಧತಿ ವೇಗವಾಗಿ ಬೆಳೆಯುತ್ತಿರುವ ಈ ಸಂದರ್ಭದಲ್ಲಿ ರಾಜ್ಯದಲ್ಲಿಯೂ ಹೈಡ್ರೊಪೊನಿಕ್ ಕೃಷಿ ಉತ್ತೇಜಿಸುವ ಅಗತ್ಯವಿದೆ’ ಎಂದರು.</p>.<p>ಫಾರ್ಮ್ಸ್–2050 ಕಂಪನಿಯ ಮುಖ್ಯಸ್ಥರಾದ ಬಿ.ಎಂ. ಪಾಟೀಲ ಅವರು, ‘ಮಧ್ಯಮ ವರ್ಗದ ಕೃಷಿಕರು ಆಧುನಿಕ ತಂತ್ರಜ್ಞಾನವನ್ನು ಸರಳವಾಗಿ ಬಳಸಿಕೊಳ್ಳುವತ್ತ ಮುಖ ಮಾಡಬೇಕು. ಭವಿಷ್ಯದಲ್ಲಿ ಎದುರಾಗಲಿರುವ ನೀರಿನ ಅಭಾವದಲ್ಲಿ, ಸುಲಭ ವಿಧಾನಗಳ ಮೂಲಕ ಹೇಗೆ ಕೃಷಿ ಮಾಡಬೇಕು ಎಂಬುದರತ್ತ ಹೆಚ್ಚಿನ ಗಮನ ಹರಿಸಬೇಕು’ ಎಂದರು.</p>.<p>ಆ್ಯಮ್ಹೈಡ್ರೊ ಕಂಪನಿಯ ಮುಖ್ಯ ಕಾರ್ಯನಿರ್ವಾಹಕಿ ಜೆನ್ನಿ ಹ್ಯಾರಿಸ್ ಮತ್ತು ತಾಂತ್ರಿಕ ನಿರ್ದೇಶಕ ಜೋ ಸ್ವಾರ್ಟ್ಸ್ ಪ್ರಶ್ನೋತ್ತರ ಸಂವಾದ ನಡೆಸಿಕೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>