ಕೆಎಂಎಫ್ನಲ್ಲಿ ನೌಕರಿ ಕೊಡಿಸುವ ನೆಪದಲ್ಲಿ ವಂಚನೆ: ಸಿನಿಮಾ ನಿರ್ಮಾಪಕ ಬಂಧನ

ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್)ನಲ್ಲಿ ನೌಕರಿ ಕೊಡಿಸುವುದಾಗಿ ನಂಬಿಸಿ ಅಭ್ಯರ್ಥಿಗಳಿಂದ ಲಕ್ಷಾಂತರ ರೂಪಾಯಿ ಪಡೆದು ವಂಚಿಸಿದ್ದ ಸಿನಿಮಾ ನಿರ್ಮಾಪಕ ಪ್ರಕಾಶ್ ಎಂಬಾತನನ್ನು ಆಡುಗೋಡಿ ಪೊಲೀಸರು ಬಂಧಿಸಿದ್ದಾರೆ.
ಕೆಎಂಎಫ್ನಲ್ಲಿ ಈಚೆಗೆ ತಾಂತ್ರಿಕ ಅಧಿಕಾರಿ ಹಾಗೂ ಸಹಾಯಕ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆದಿತ್ತು. ಪರಿಚಯಸ್ಥ ಅಭ್ಯರ್ಥಿಗಳಿಗೆ ನೌಕರಿ ಕೊಡಿಸುತ್ತೇನೆ ಎಂದು ಹೇಳಿ ಹಣ ಪಡೆದುಕೊಂಡಿದ್ದ. ಚಿಕ್ಕಬಳ್ಳಾಪುರ ತಾಲ್ಲೂಕಿನ ಚರಣ್ರಾಜ್ ಅವರಿಗೆ ನೌಕರಿ ಕೊಡಿಸುವುದಾಗಿ ಅವರಿಂದ ₹ 10 ಲಕ್ಷ ಪಡೆದುಕೊಂಡಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಆರೋಪಿ ಪ್ರಕಾಶ್ ನಿವೇಶನವೊಂದನ್ನು ಮಾರಾಟ ಮಾಡಿ ‘ಶಬ್ಬಾಸ್ ಬಡ್ಡಿ ಮಗನೇ’ ಎಂಬ ಸಿನಿಮಾ ನಿರ್ಮಿಸುತ್ತಿದ್ದ. ಸಿನಿಮಾ ನಿರ್ಮಾಣಕ್ಕೆ ಹಣದ ಸಮಸ್ಯೆ ಎದುರಾಗಿತ್ತು. ಆಗ ನೌಕರಿ ಕೊಡಿಸುತ್ತೇನೆ ಎಂದು 10ಕ್ಕೂ ಹೆಚ್ಚು ಮಂದಿಯಿಂದ ಹಣ ಪಡೆದು ವಂಚಿಸಿದ್ದ ಎಂದು ಮೂಲಗಳು ತಿಳಿಸಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.