<p><strong>ಬೊಮ್ಮನಹಳ್ಳಿ</strong>: ‘ನಗರದ ಹಳೆಯ ಗ್ರಾಮವಾದ ಬೇಗೂರನ್ನು ತಾಲ್ಲೂಕು ಕೇಂದ್ರ ಮಾಡಬೇಕು’ ಎಂದು ಸಂಸದ ಡಿ.ಕೆ. ಸುರೇಶ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.</p>.<p>ಬೇಗೂರಿನಲ್ಲಿ ವಾರ್ಡ್ ಕಚೇರಿ ಹಾಗೂ ಅಂಬೇಡ್ಕರ್ ಗ್ರಂಥಾಲಯವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು.</p>.<p>‘ಬೇಗೂರು ಸುತ್ತಮುತ್ತಲ ಜನ ಪಹಣಿ ಪಡೆಯಬೇಕೆಂದರೂ ನಗರ ಕೇಂದ್ರದಲ್ಲಿರುವ ತಾಲ್ಲೂಕು ಕಚೇರಿಗೆ ಅಲೆಯಬೇಕಾಗಿದೆ. ಇದನ್ನು ತಪ್ಪಿಸಲು ಬೇಗೂರು ಮತ್ತು ಜಿಗಣಿ ಪ್ರದೇಶವನ್ನು ಒಳಗೊಂಡು ತಾಲ್ಲೂಕು ಕೇಂದ್ರದ ಅಗತ್ಯವಿದೆ ಎಂದರು.</p>.<p>‘ಬೃಹದಾಕಾರವಾಗಿ ಬೆಳೆದಿರುವ ಬೆಂಗಳೂರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವವರೆಗೂ ಬಿಬಿಎಂಪಿ ಹೊಸ ವಸತಿ ಸಮುಚ್ಚಯಗಳಿಗೆ ನಿರ್ಮಾಣಕ್ಕೆ ಅವಕಾಶ ಮಾಡಿಕೊಡಬಾರದು’ ಎಂದರು.</p>.<p>₹2.5 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಹೈಟೆಕ್ ವಾರ್ಡ್ ಕಚೇರಿ, ಗ್ರಂಥಾಲಯ ಕೇಂದ್ರ, ಸಾರ್ವಜನಿಕ ಶೌಚಾಲಯ ಹಾಗೂ ಸಮುದಾಯವನ್ನು ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಲಾಯಿತು.</p>.<p>ಗ್ರಂಥಾಲಯ ಇಲಾಖೆಯ ನಿರ್ದೇಶಕ ಸತೀಶ್ ಕುಮಾರ್ ಹೊಸಮನಿ, ‘ಬಿಬಿಎಂಪಿಯಿಂದ ಗ್ರಂಥಾಲಯ ಇಲಾಖೆಗೆ ತೆರಿಗೆ ಬಾಕಿ ಬರಬೇಕಿದೆ. ಈ ಹಣವನ್ನು ಬಿಡುಗಡೆ ಮಾಡಿದರೆ ಬಿಬಿಎಂಪಿ ವ್ಯಾಪ್ತಿಯ ಎಲ್ಲ ಗ್ರಂಥಾಲಯಗಳನ್ನು ಡಿಜಿಟಲ್ ಗ್ರಂಥಾಲಯಗಳಾಗಿ ಪರಿರ್ವತಿಸಬಹುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೊಮ್ಮನಹಳ್ಳಿ</strong>: ‘ನಗರದ ಹಳೆಯ ಗ್ರಾಮವಾದ ಬೇಗೂರನ್ನು ತಾಲ್ಲೂಕು ಕೇಂದ್ರ ಮಾಡಬೇಕು’ ಎಂದು ಸಂಸದ ಡಿ.ಕೆ. ಸುರೇಶ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.</p>.<p>ಬೇಗೂರಿನಲ್ಲಿ ವಾರ್ಡ್ ಕಚೇರಿ ಹಾಗೂ ಅಂಬೇಡ್ಕರ್ ಗ್ರಂಥಾಲಯವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು.</p>.<p>‘ಬೇಗೂರು ಸುತ್ತಮುತ್ತಲ ಜನ ಪಹಣಿ ಪಡೆಯಬೇಕೆಂದರೂ ನಗರ ಕೇಂದ್ರದಲ್ಲಿರುವ ತಾಲ್ಲೂಕು ಕಚೇರಿಗೆ ಅಲೆಯಬೇಕಾಗಿದೆ. ಇದನ್ನು ತಪ್ಪಿಸಲು ಬೇಗೂರು ಮತ್ತು ಜಿಗಣಿ ಪ್ರದೇಶವನ್ನು ಒಳಗೊಂಡು ತಾಲ್ಲೂಕು ಕೇಂದ್ರದ ಅಗತ್ಯವಿದೆ ಎಂದರು.</p>.<p>‘ಬೃಹದಾಕಾರವಾಗಿ ಬೆಳೆದಿರುವ ಬೆಂಗಳೂರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವವರೆಗೂ ಬಿಬಿಎಂಪಿ ಹೊಸ ವಸತಿ ಸಮುಚ್ಚಯಗಳಿಗೆ ನಿರ್ಮಾಣಕ್ಕೆ ಅವಕಾಶ ಮಾಡಿಕೊಡಬಾರದು’ ಎಂದರು.</p>.<p>₹2.5 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಹೈಟೆಕ್ ವಾರ್ಡ್ ಕಚೇರಿ, ಗ್ರಂಥಾಲಯ ಕೇಂದ್ರ, ಸಾರ್ವಜನಿಕ ಶೌಚಾಲಯ ಹಾಗೂ ಸಮುದಾಯವನ್ನು ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಲಾಯಿತು.</p>.<p>ಗ್ರಂಥಾಲಯ ಇಲಾಖೆಯ ನಿರ್ದೇಶಕ ಸತೀಶ್ ಕುಮಾರ್ ಹೊಸಮನಿ, ‘ಬಿಬಿಎಂಪಿಯಿಂದ ಗ್ರಂಥಾಲಯ ಇಲಾಖೆಗೆ ತೆರಿಗೆ ಬಾಕಿ ಬರಬೇಕಿದೆ. ಈ ಹಣವನ್ನು ಬಿಡುಗಡೆ ಮಾಡಿದರೆ ಬಿಬಿಎಂಪಿ ವ್ಯಾಪ್ತಿಯ ಎಲ್ಲ ಗ್ರಂಥಾಲಯಗಳನ್ನು ಡಿಜಿಟಲ್ ಗ್ರಂಥಾಲಯಗಳಾಗಿ ಪರಿರ್ವತಿಸಬಹುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>