ವರ್ಚ್ಯುವಲ್ ಮೂಲಕ ನಡೆಸಿದ ಸಭೆಯ ವಿವರಗಳನ್ನು ಟ್ವಿಟರ್ನಲ್ಲಿ ಹಂಚಿಕೊಂಡಿರುವ ತೇಜಸ್ವಿ, ‘ಸರ್ಕಾರದ ಆದೇಶದಂತೆ ಎಲ್ಲ ಆಸ್ಪತ್ರೆಗಳೂ ಶೇಕಡ 50ರಷ್ಟು ಹಾಸಿಗೆಗಳನ್ನು ಕೋವಿಡ್ ರೋಗಿಗಳ ಚಿಕಿತ್ಸೆಗೆ ಕಾಯ್ದಿರಿಸುವುದನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ. ಇಂತಹ ಕ್ಲಿಷ್ಟಕರ ಸನ್ನಿವೇಶದ ಲಾಭ ಪಡೆಯಲು ಯತ್ನಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಕೆ ನೀಡಿದ್ದಾರೆ.