ಆಯೋಗದ ಅಧ್ಯಕ್ಷ ಷಡಕ್ಷರಿ ಸ್ವಾಮಿಯವರಿಗೆ ಪತ್ರ ಬರೆದಿರುವ ತೇಜಸ್ವಿ ಸೂರ್ಯ, ‘ಡಿ.22ರಂದು ಗ್ರಾಮ ಪಂಚಾಯಿತಿ ಚುನಾವಣೆಗಳು ನಿಗದಿಯಾಗಿದ್ದು, ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಇದರಿಂದ ಸರ್ಕಾರಿ ನೌಕರರು ಚುನಾವಣಾ ಕರ್ತವ್ಯಕ್ಕೆ ಹೋಗಬೇಕಾಗುತ್ತದೆ. ಅಭ್ಯರ್ಥಿಗಳು ಮತ್ತು ಸರ್ಕಾರಿ ನೌಕರರು ಮತದಾನದಿಂದಲೂ ವಂಚಿತರಾಗಬೇಕಾಗುತ್ತದೆ ಎಂದು ಹಲವು ಅಭ್ಯರ್ಥಿಗಳು ಹೇಳುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆಗಳೂ ನಿಗದಿಯಾಗಿರುವುದನ್ನು ಗಮನಕ್ಕೆ ತಂದಿದ್ದಾರೆ’ ಎಂದಿರುವ ಅವರು, ಪರೀಕ್ಷೆಯನ್ನು ಮುಂದೂಡಲು ಕ್ರಮ ಕೈಗೊಳ್ಳಬೇಕು ಎಂದು ಕೋರಿದ್ದಾರೆ.