<p><strong>ಹೆಸರಘಟ್ಟ</strong>: ಹೋಬಳಿಯಲ್ಲಿ ಪದವೀಧರರು, ಉನ್ನತ ಶಿಕ್ಷಣ ಪಡೆದವರು ಸ್ಪರ್ಧಿಸುವ ಮೂಲಕ ಪಂಚಾಯಿತಿ ಚುನಾವಣಾ ಕಣ ರಂಗೇರಿದೆ.</p>.<p>ಶಿವಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೀತಕೆಂಪನಹಳ್ಳಿ ಗ್ರಾಮದಲ್ಲಿ ಎಂ.ಟೆಕ್ ಪದವೀಧರೆ ವಿ.ಶ್ವೇತಾ ಚುನಾವಣೆಗೆ ಸ್ಪರ್ಧಿಸಿದ್ದಾರೆ.</p>.<p>‘ಗ್ರಾಮದಲ್ಲಿರುವ ಜನರು ಅನೇಕ ಮಾಹಿತಿಗಳನ್ನು ತಿಳಿದುಕೊಳ್ಳಲು ನನ್ನ ಬಳಿ ಬರುತ್ತಿದ್ದರು. ಯಾವ ಅರ್ಜಿ, ಎಲ್ಲಿ ಸಿಗುತ್ತದೆ ಎಂಬ ಪ್ರಾಥಮಿಕ ಮಾಹಿತಿಯೂ ಅವರಿಗೆ ಇಲ್ಲ. ಇಂತಹ ಮುಗ್ಧ ಜನರ ಧ್ವನಿಯಾಗಿ ಇರಬೇಕು ಎನ್ನುವ ಕಾರಣಕ್ಕಾಗಿ ಸ್ಪರ್ಧಿಸಿದ್ದೇನೆ’ ಎಂದು ಅವರು ಹೇಳುತ್ತಾರೆ.</p>.<p>‘ಹಳ್ಳಿಗಳಲ್ಲಿರುವ ಸಮಸ್ಯೆಗಳ ಬಗ್ಗೆ ಮಹಿಳೆಯರಿಗೆ ಚೆನ್ನಾಗಿ ತಿಳಿದಿರುತ್ತದೆ. ನನ್ನ ಊರು, ನನ್ನ ಜನರ ಬಗ್ಗೆ ಕಾಳಜಿ ಇರುವುದರಿಂದ ಈ ನಿರ್ಧಾರಕ್ಕೆ ಬಂದಿದ್ದೇನೆ. ಗ್ರಾಮದಲ್ಲಿರುವ ಎಲ್ಲ ಮಕ್ಕಳಿಗೂ ಶಿಕ್ಷಣ ನೀಡಬೇಕೆಂಬ ಉದ್ದೇಶ ಹೊಂದಿದ್ದೇನೆ’ ಎಂದೂ ಅವರು ಹೇಳಿದರು.</p>.<p>‘ರಾಜಕೀಯ ಎಂದರೆ ಏನು ಎಂದು ಗೊತ್ತಿಲ್ಲದ ನನಗೆ ಕುಟುಂಬದ ಸದಸ್ಯರು ಮಾರ್ಗದರ್ಶನ ನೀಡುತ್ತಿದ್ದಾರೆ. ಸರ್ಕಾರದ ಯೋಜನೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಿ ಗ್ರಾಮದ ಏಳಿಗೆಗೆ ಶ್ರಮಿಸುವ ಗುರಿ ಹೊಂದಿದ್ದೇನೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೆಸರಘಟ್ಟ</strong>: ಹೋಬಳಿಯಲ್ಲಿ ಪದವೀಧರರು, ಉನ್ನತ ಶಿಕ್ಷಣ ಪಡೆದವರು ಸ್ಪರ್ಧಿಸುವ ಮೂಲಕ ಪಂಚಾಯಿತಿ ಚುನಾವಣಾ ಕಣ ರಂಗೇರಿದೆ.</p>.<p>ಶಿವಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೀತಕೆಂಪನಹಳ್ಳಿ ಗ್ರಾಮದಲ್ಲಿ ಎಂ.ಟೆಕ್ ಪದವೀಧರೆ ವಿ.ಶ್ವೇತಾ ಚುನಾವಣೆಗೆ ಸ್ಪರ್ಧಿಸಿದ್ದಾರೆ.</p>.<p>‘ಗ್ರಾಮದಲ್ಲಿರುವ ಜನರು ಅನೇಕ ಮಾಹಿತಿಗಳನ್ನು ತಿಳಿದುಕೊಳ್ಳಲು ನನ್ನ ಬಳಿ ಬರುತ್ತಿದ್ದರು. ಯಾವ ಅರ್ಜಿ, ಎಲ್ಲಿ ಸಿಗುತ್ತದೆ ಎಂಬ ಪ್ರಾಥಮಿಕ ಮಾಹಿತಿಯೂ ಅವರಿಗೆ ಇಲ್ಲ. ಇಂತಹ ಮುಗ್ಧ ಜನರ ಧ್ವನಿಯಾಗಿ ಇರಬೇಕು ಎನ್ನುವ ಕಾರಣಕ್ಕಾಗಿ ಸ್ಪರ್ಧಿಸಿದ್ದೇನೆ’ ಎಂದು ಅವರು ಹೇಳುತ್ತಾರೆ.</p>.<p>‘ಹಳ್ಳಿಗಳಲ್ಲಿರುವ ಸಮಸ್ಯೆಗಳ ಬಗ್ಗೆ ಮಹಿಳೆಯರಿಗೆ ಚೆನ್ನಾಗಿ ತಿಳಿದಿರುತ್ತದೆ. ನನ್ನ ಊರು, ನನ್ನ ಜನರ ಬಗ್ಗೆ ಕಾಳಜಿ ಇರುವುದರಿಂದ ಈ ನಿರ್ಧಾರಕ್ಕೆ ಬಂದಿದ್ದೇನೆ. ಗ್ರಾಮದಲ್ಲಿರುವ ಎಲ್ಲ ಮಕ್ಕಳಿಗೂ ಶಿಕ್ಷಣ ನೀಡಬೇಕೆಂಬ ಉದ್ದೇಶ ಹೊಂದಿದ್ದೇನೆ’ ಎಂದೂ ಅವರು ಹೇಳಿದರು.</p>.<p>‘ರಾಜಕೀಯ ಎಂದರೆ ಏನು ಎಂದು ಗೊತ್ತಿಲ್ಲದ ನನಗೆ ಕುಟುಂಬದ ಸದಸ್ಯರು ಮಾರ್ಗದರ್ಶನ ನೀಡುತ್ತಿದ್ದಾರೆ. ಸರ್ಕಾರದ ಯೋಜನೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಿ ಗ್ರಾಮದ ಏಳಿಗೆಗೆ ಶ್ರಮಿಸುವ ಗುರಿ ಹೊಂದಿದ್ದೇನೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>