<p><strong>ಬೆಂಗಳೂರು</strong>: ರಾಜ್ಯದ ಉದ್ದಿಮೆಗಳಲ್ಲಿ ಪರಭಾಷಿಕರ ಅವೈಜ್ಞಾನಿಕ ವಲಸೆ ತಡೆಗಟ್ಟಲು ಹಾಗೂ ಪ್ರಾದೇಶಿಕ ಅಸಮಾನತೆ ತೊಲಗಿಸಲು ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ‘ಮುಖ್ಯಮಂತ್ರಿ’ ಚಂದ್ರು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದ್ದಾರೆ.</p>.<p>ಈ ಸಂಬಂಧ ಪತ್ರ ಬರೆದಿರುವ ಅವರು, ‘ಪ್ರತಿಯೊಂದು ರಾಜ್ಯಗಳಲ್ಲಿಯೂ ಮಾನವ ಅಭಿವೃದ್ಧಿಯ ಜೊತೆ ಜೊತೆಗೆ ಕೈಗಾರಿಕಾ ಅಭಿವೃದ್ಧಿಯು ಆಗಬೇಕೆಂಬುದು ಎಲ್ಲ ಸರ್ಕಾರಗಳ ಮೂಲ ಆಶಯ. ಈ ಮೂಲಕ ಆಯಾ ರಾಜ್ಯದ ಸ್ಥಳೀಯರಿಗೆ ಉದ್ಯೋಗಾವಕಾಶಗಳು ದೊರೆತು ಆರ್ಥಿಕ ಸುಭದ್ರತೆಯನ್ನು ಕಲ್ಪಿಸುವುದು ಸರ್ಕಾರಗಳ ಆದ್ಯ ಕರ್ತವ್ಯ’ ಎಂದು ಹೇಳಿದ್ದಾರೆ.</p>.<p>ಹೊರ ರಾಜ್ಯಗಳ ಲಕ್ಷಾಂತರ ಕಾರ್ಮಿಕರು ವಲಸೆ ಬಂದು ರಾಜ್ಯದ ಉದ್ದಿಮೆಗಳಲ್ಲಿ ಉದ್ಯೋಗಾವಕಾಶಗಳನ್ನು ಕಂಡುಕೊಂಡು, ಕನ್ನಡ ನಾಡಿನ ಭಾಷೆ, ಸಂಸ್ಕೃತಿ ಹಾಗೂ ಪ್ರಾದೇಶಿಕ ಸಮಾನತೆಗೆ ಕೊಡಲಿ ಪೆಟ್ಟು ನೀಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. </p>.<p>ಕನ್ನಡಿಗರು ತಮ್ಮ ನೆಲದಲ್ಲಿಯೇ ಉದ್ಯೋಗಾವಕಾಶಗಳಿಂದ ವಂಚಿತರಾಗಿ ಅನಾಥರಾಗಿ ಬದುಕುವಂತಹ ವಾತಾವರಣ ಮೂಡಿದೆ. ಪ್ರತಿಯೊಂದು ಉದ್ಯಮಗಳಲ್ಲಿಯೂ ಎ , ಬಿ, ಸಿ ಮತ್ತು ಡಿ ಹುದ್ದೆಗಳಲ್ಲಿ ಕನ್ನಡಿಗರಿಗೆ ಕ್ರಮವಾಗಿ ಶೇಕಡ 60, ಶೇಕಡ 80 ಹಾಗೂ ಶೇಕಡ 100ರಷ್ಟು ಹುದ್ದೆಗಳು ಸಿಗಬೇಕೆಂಬ ಸರ್ಕಾರದ ಕಾನೂನು ಉಲ್ಲಂಘನೆ ಆಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.</p>.<p>ಪ್ರಾದೇಶಿಕ ಅಸಮಾನತೆ ತೊಲಗಿಸಲು ಕೂಡಲೇ ಉನ್ನತ ಹಂತದ ಅಧಿಕಾರಿಗಳ ಜೊತೆ ಸಭೆಗಳನ್ನು ನಡೆಸಿ, ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ಕನ್ನಡಿಗರಿಗೆ ಉದ್ಯೋಗಾವಕಾಶ ನೀಡಿ ಅವರ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆಗೆ ಅನುಕೂಲ ಮಾಡಿಕೊಡಬೇಕು ಎಂದು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಜ್ಯದ ಉದ್ದಿಮೆಗಳಲ್ಲಿ ಪರಭಾಷಿಕರ ಅವೈಜ್ಞಾನಿಕ ವಲಸೆ ತಡೆಗಟ್ಟಲು ಹಾಗೂ ಪ್ರಾದೇಶಿಕ ಅಸಮಾನತೆ ತೊಲಗಿಸಲು ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ‘ಮುಖ್ಯಮಂತ್ರಿ’ ಚಂದ್ರು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದ್ದಾರೆ.</p>.<p>ಈ ಸಂಬಂಧ ಪತ್ರ ಬರೆದಿರುವ ಅವರು, ‘ಪ್ರತಿಯೊಂದು ರಾಜ್ಯಗಳಲ್ಲಿಯೂ ಮಾನವ ಅಭಿವೃದ್ಧಿಯ ಜೊತೆ ಜೊತೆಗೆ ಕೈಗಾರಿಕಾ ಅಭಿವೃದ್ಧಿಯು ಆಗಬೇಕೆಂಬುದು ಎಲ್ಲ ಸರ್ಕಾರಗಳ ಮೂಲ ಆಶಯ. ಈ ಮೂಲಕ ಆಯಾ ರಾಜ್ಯದ ಸ್ಥಳೀಯರಿಗೆ ಉದ್ಯೋಗಾವಕಾಶಗಳು ದೊರೆತು ಆರ್ಥಿಕ ಸುಭದ್ರತೆಯನ್ನು ಕಲ್ಪಿಸುವುದು ಸರ್ಕಾರಗಳ ಆದ್ಯ ಕರ್ತವ್ಯ’ ಎಂದು ಹೇಳಿದ್ದಾರೆ.</p>.<p>ಹೊರ ರಾಜ್ಯಗಳ ಲಕ್ಷಾಂತರ ಕಾರ್ಮಿಕರು ವಲಸೆ ಬಂದು ರಾಜ್ಯದ ಉದ್ದಿಮೆಗಳಲ್ಲಿ ಉದ್ಯೋಗಾವಕಾಶಗಳನ್ನು ಕಂಡುಕೊಂಡು, ಕನ್ನಡ ನಾಡಿನ ಭಾಷೆ, ಸಂಸ್ಕೃತಿ ಹಾಗೂ ಪ್ರಾದೇಶಿಕ ಸಮಾನತೆಗೆ ಕೊಡಲಿ ಪೆಟ್ಟು ನೀಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. </p>.<p>ಕನ್ನಡಿಗರು ತಮ್ಮ ನೆಲದಲ್ಲಿಯೇ ಉದ್ಯೋಗಾವಕಾಶಗಳಿಂದ ವಂಚಿತರಾಗಿ ಅನಾಥರಾಗಿ ಬದುಕುವಂತಹ ವಾತಾವರಣ ಮೂಡಿದೆ. ಪ್ರತಿಯೊಂದು ಉದ್ಯಮಗಳಲ್ಲಿಯೂ ಎ , ಬಿ, ಸಿ ಮತ್ತು ಡಿ ಹುದ್ದೆಗಳಲ್ಲಿ ಕನ್ನಡಿಗರಿಗೆ ಕ್ರಮವಾಗಿ ಶೇಕಡ 60, ಶೇಕಡ 80 ಹಾಗೂ ಶೇಕಡ 100ರಷ್ಟು ಹುದ್ದೆಗಳು ಸಿಗಬೇಕೆಂಬ ಸರ್ಕಾರದ ಕಾನೂನು ಉಲ್ಲಂಘನೆ ಆಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.</p>.<p>ಪ್ರಾದೇಶಿಕ ಅಸಮಾನತೆ ತೊಲಗಿಸಲು ಕೂಡಲೇ ಉನ್ನತ ಹಂತದ ಅಧಿಕಾರಿಗಳ ಜೊತೆ ಸಭೆಗಳನ್ನು ನಡೆಸಿ, ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ಕನ್ನಡಿಗರಿಗೆ ಉದ್ಯೋಗಾವಕಾಶ ನೀಡಿ ಅವರ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆಗೆ ಅನುಕೂಲ ಮಾಡಿಕೊಡಬೇಕು ಎಂದು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>