<p><strong>ಬೆಂಗಳೂರು:</strong> ಬೆಂಗಳೂರು–ಮುಂಬೈ ಮಧ್ಯೆ ಹೈಸ್ಪೀಡ್ ರೈಲು ಕಾರಿಡಾರ್ ಯೋಜನೆಯನ್ನು ಘೋಷಿಸಬೇಕು ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಅವರು ಆಗ್ರಹಿಸಿದ್ದಾರೆ.</p>.<p>ಈ ಕುರಿತು, ಪ್ರಧಾನಿ ನರೇಂದ್ರ ಮೋದಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಪಾಟೀಲರು ಪತ್ರ ಬರೆದಿದ್ದಾರೆ.</p>.<p>ಈ ಯೋಜನೆ ಜಾರಿಯಾದರೆ ದೇಶದ ತಂತ್ರಜ್ಞಾನ ರಾಜಧಾನಿ ಬೆಂಗಳೂರು ಮತ್ತು ಆರ್ಥಿಕ ರಾಜಧಾನಿ ಮುಂಬೈಗೆ ಅಷ್ಟೇ ಅಲ್ಲದೆ ಕರ್ನಾಟಕ, ಮಹಾರಾಷ್ಟ್ರಕ್ಕೆ ಪ್ರಯೋಜನವಾಗಲಿದೆ ಎಂದು ತಿಳಿಸಿದ್ದಾರೆ.</p>.<p>ಕೇಂದ್ರ ಬಜೆಟ್ನಲ್ಲಿ ಈಗಾಗಲೇ ಘೋಷಿಸಿರುವ ಮುಂಬೈ-ಪುಣೆ ಹೈಸ್ಪೀಡ್ ರೈಲು ಕಾರಿಡಾರ್ ಯೋಜನೆಯನ್ನು ಬೆಂಗಳೂರುವರೆಗೂ ವಿಸ್ತರಿಸಬಹುದು. ಬೆಂಗಳೂರು-ಪುಣೆ ನಡುವೆ ಹೈಸ್ಪೀಡ್ ರೈಲು ಓಡಿಸುವುದರಿಂದ ಮಧ್ಯ ಮತ್ತು ಉತ್ತರ ಕರ್ನಾಟಕ ಹಾಗೂ ಪಶ್ಚಿಮ ಮಹಾರಾಷ್ಟ್ರದ ಸಾಂಗ್ಲಿ, ಕೊಲ್ಹಾಪುರ ಮತ್ತಿತರ ಜಿಲ್ಲೆಗಳಿಗೆ ಲಾಭವಾಗಲಿದೆ. ಹುಬ್ಬಳ್ಳಿ, ಬೆಳಗಾವಿ, ದಾವಣಗೆರೆ, ತುಮಕೂರು ಜಿಲ್ಲೆಗಳಲ್ಲಿ ಆರ್ಥಿಕ ಮತ್ತು ಔದ್ಯಮಿಕ ಚಿತ್ರಣವನ್ನು ಬದಲಿಸಲಿದೆ ಎಂದಿದ್ದಾರೆ.</p>.<p>ಬಜೆಟ್ನಲ್ಲಿ ಬೆಂಗಳೂರು-ಹೈದರಾಬಾದ್ ಮತ್ತು ಬೆಂಗಳೂರು-ಚೆನ್ನೈ ಹೈಸ್ಪೀಡ್ ರೈಲು ಕಾರಿಡಾರ್ ಯೋಜನೆಗಳನ್ನು ಘೋಷಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ, ಈ ಎರಡೂ ಮಾರ್ಗಗಳಲ್ಲಿ ರೈಲುಗಳು ಕರ್ನಾಟಕದೊಳಗೆ 100 ಕಿ.ಮೀ. ಮಾತ್ರ ಓಡುತ್ತವೆ. ಇದರಿಂದ ರಾಜ್ಯಕ್ಕೆ ಇರುವ ಪ್ರಯೋಜನ ಸೀಮಿತವಾಗಿರಲಿದೆ ಎಂದು ಅವರು ಹೇಳಿದ್ದಾರೆ.</p>.<p>ಬೆಂಗಳೂರು-ಮುಂಬೈ ನಡುವೆ ಹೈಸ್ಪೀಡ್ ರೈಲು ಯೋಜನೆ ಕುರಿತು ವಿಸ್ತೃತ ಕಾರ್ಯಸಾಧ್ಯತಾ ಅಧ್ಯಯನ ನಡೆಸಬೇಕು ಎಂದು ಪಾಟೀಲ ಅವರು ಪತ್ರದಲ್ಲಿ ಒತ್ತಾಯಿಸಿದ್ದಾರೆ.</p>.<p> <strong>ಜೋಶಿ ಎಚ್ಡಿಕೆ ಸ್ಪಂದನೆ ಸ್ವಾಗತಾರ್ಹ</strong></p><p>'ಕೇಂದ್ರ ಬಜೆಟ್ ಮಂಡನೆಯಾದ ಕೂಡಲೇ ಬೆಂಗಳೂರು- ಪುಣೆ- ಮುಂಬೈ ನಡುವೆ ಹೈಸ್ಪೀಡ್ ರೈಲು ಕಾರಿಡಾರ್ ಅಗತ್ಯವಿದೆ ಎಂದು ನಾನು ಹೇಳಿದ್ದೆ. ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ ಮತ್ತು ಎಚ್. ಡಿ. ಕುಮಾರಸ್ವಾಮಿ ಈ ಬಗ್ಗೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರೊಂದಿಗೆ ಚರ್ಚಿಸಿರುವುದು ಸ್ವಾಗತಾರ್ಹ. ಇದು ಕೇವಲ ಭೇಟಿಗೆ ಸೀಮಿತಗೊಳ್ಳದೇ ತಾರ್ಕಿಕ ಅಂತ್ಯ ಕಾಣುವಂತೆ ಮಾಡಬೇಕು’ ಎಂದು ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೆಂಗಳೂರು–ಮುಂಬೈ ಮಧ್ಯೆ ಹೈಸ್ಪೀಡ್ ರೈಲು ಕಾರಿಡಾರ್ ಯೋಜನೆಯನ್ನು ಘೋಷಿಸಬೇಕು ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಅವರು ಆಗ್ರಹಿಸಿದ್ದಾರೆ.</p>.<p>ಈ ಕುರಿತು, ಪ್ರಧಾನಿ ನರೇಂದ್ರ ಮೋದಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಪಾಟೀಲರು ಪತ್ರ ಬರೆದಿದ್ದಾರೆ.</p>.<p>ಈ ಯೋಜನೆ ಜಾರಿಯಾದರೆ ದೇಶದ ತಂತ್ರಜ್ಞಾನ ರಾಜಧಾನಿ ಬೆಂಗಳೂರು ಮತ್ತು ಆರ್ಥಿಕ ರಾಜಧಾನಿ ಮುಂಬೈಗೆ ಅಷ್ಟೇ ಅಲ್ಲದೆ ಕರ್ನಾಟಕ, ಮಹಾರಾಷ್ಟ್ರಕ್ಕೆ ಪ್ರಯೋಜನವಾಗಲಿದೆ ಎಂದು ತಿಳಿಸಿದ್ದಾರೆ.</p>.<p>ಕೇಂದ್ರ ಬಜೆಟ್ನಲ್ಲಿ ಈಗಾಗಲೇ ಘೋಷಿಸಿರುವ ಮುಂಬೈ-ಪುಣೆ ಹೈಸ್ಪೀಡ್ ರೈಲು ಕಾರಿಡಾರ್ ಯೋಜನೆಯನ್ನು ಬೆಂಗಳೂರುವರೆಗೂ ವಿಸ್ತರಿಸಬಹುದು. ಬೆಂಗಳೂರು-ಪುಣೆ ನಡುವೆ ಹೈಸ್ಪೀಡ್ ರೈಲು ಓಡಿಸುವುದರಿಂದ ಮಧ್ಯ ಮತ್ತು ಉತ್ತರ ಕರ್ನಾಟಕ ಹಾಗೂ ಪಶ್ಚಿಮ ಮಹಾರಾಷ್ಟ್ರದ ಸಾಂಗ್ಲಿ, ಕೊಲ್ಹಾಪುರ ಮತ್ತಿತರ ಜಿಲ್ಲೆಗಳಿಗೆ ಲಾಭವಾಗಲಿದೆ. ಹುಬ್ಬಳ್ಳಿ, ಬೆಳಗಾವಿ, ದಾವಣಗೆರೆ, ತುಮಕೂರು ಜಿಲ್ಲೆಗಳಲ್ಲಿ ಆರ್ಥಿಕ ಮತ್ತು ಔದ್ಯಮಿಕ ಚಿತ್ರಣವನ್ನು ಬದಲಿಸಲಿದೆ ಎಂದಿದ್ದಾರೆ.</p>.<p>ಬಜೆಟ್ನಲ್ಲಿ ಬೆಂಗಳೂರು-ಹೈದರಾಬಾದ್ ಮತ್ತು ಬೆಂಗಳೂರು-ಚೆನ್ನೈ ಹೈಸ್ಪೀಡ್ ರೈಲು ಕಾರಿಡಾರ್ ಯೋಜನೆಗಳನ್ನು ಘೋಷಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ, ಈ ಎರಡೂ ಮಾರ್ಗಗಳಲ್ಲಿ ರೈಲುಗಳು ಕರ್ನಾಟಕದೊಳಗೆ 100 ಕಿ.ಮೀ. ಮಾತ್ರ ಓಡುತ್ತವೆ. ಇದರಿಂದ ರಾಜ್ಯಕ್ಕೆ ಇರುವ ಪ್ರಯೋಜನ ಸೀಮಿತವಾಗಿರಲಿದೆ ಎಂದು ಅವರು ಹೇಳಿದ್ದಾರೆ.</p>.<p>ಬೆಂಗಳೂರು-ಮುಂಬೈ ನಡುವೆ ಹೈಸ್ಪೀಡ್ ರೈಲು ಯೋಜನೆ ಕುರಿತು ವಿಸ್ತೃತ ಕಾರ್ಯಸಾಧ್ಯತಾ ಅಧ್ಯಯನ ನಡೆಸಬೇಕು ಎಂದು ಪಾಟೀಲ ಅವರು ಪತ್ರದಲ್ಲಿ ಒತ್ತಾಯಿಸಿದ್ದಾರೆ.</p>.<p> <strong>ಜೋಶಿ ಎಚ್ಡಿಕೆ ಸ್ಪಂದನೆ ಸ್ವಾಗತಾರ್ಹ</strong></p><p>'ಕೇಂದ್ರ ಬಜೆಟ್ ಮಂಡನೆಯಾದ ಕೂಡಲೇ ಬೆಂಗಳೂರು- ಪುಣೆ- ಮುಂಬೈ ನಡುವೆ ಹೈಸ್ಪೀಡ್ ರೈಲು ಕಾರಿಡಾರ್ ಅಗತ್ಯವಿದೆ ಎಂದು ನಾನು ಹೇಳಿದ್ದೆ. ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ ಮತ್ತು ಎಚ್. ಡಿ. ಕುಮಾರಸ್ವಾಮಿ ಈ ಬಗ್ಗೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರೊಂದಿಗೆ ಚರ್ಚಿಸಿರುವುದು ಸ್ವಾಗತಾರ್ಹ. ಇದು ಕೇವಲ ಭೇಟಿಗೆ ಸೀಮಿತಗೊಳ್ಳದೇ ತಾರ್ಕಿಕ ಅಂತ್ಯ ಕಾಣುವಂತೆ ಮಾಡಬೇಕು’ ಎಂದು ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>