<p><strong>ಬೆಂಗಳೂರು:</strong> ಬೇಸಿಗೆಯ ದಿನಗಳಲ್ಲಿ ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ಮುಂಬೈನ ಲೋಕಮಾನ್ಯ ತಿಲಕ್ ಟರ್ಮಿನಸ್ ಮತ್ತು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ನಡುವೆ ಸಾಪ್ತಾಹಿಕ ವಿಶೇಷ ರೈಲುಗಳನ್ನು ಓಡಿಸುವುದಾಗಿ ಮಧ್ಯ ರೈಲ್ವೆಯು ಸೂಚಿಸಿದೆ.</p><p>ರೈಲು ಸಂಖ್ಯೆ 01013 ಲೋಕಮಾನ್ಯ ತಿಲಕ್ ಟರ್ಮಿನಸ್–ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್, ಬೆಂಗಳೂರು ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲು, ಏಪ್ರಿಲ್ 19 ರಿಂದ ಜುಲೈ 12, 2026 ರವರೆಗೆ ಪ್ರತಿ ಭಾನುವಾರ ಬೆಳಿಗ್ಗೆ 11:50 ಗಂಟೆಗೆ ಲೋಕಮಾನ್ಯ ತಿಲಕ್ ಟರ್ಮಿನಸ್ ನಿಂದ ಹೊರಟು, ಸೋಮವಾರ ಬೆಳಿಗ್ಗೆ 11:45 ಗಂಟೆಗೆ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ತಲುಪಲಿದೆ. </p><p>ಮರು ಪ್ರಯಾಣದಲ್ಲಿ, ರೈಲು ಸಂಖ್ಯೆ 01014 ಎಸ್ಎಂವಿಟಿ ಬೆಂಗಳೂರು–ಲೋಕಮಾನ್ಯ ತಿಲಕ್ ಟರ್ಮಿನಸ್ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲು, ಏಪ್ರಿಲ್ 20 ರಿಂದ ಜುಲೈ 13, 2026 ರವರೆಗೆ ಪ್ರತಿ ಸೋಮವಾರ ಮಧ್ಯಾಹ್ನ 01:50 ಗಂಟೆಗೆ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ನಿಂದ ಹೊರಟು, ಮಂಗಳವಾರ ಮಧ್ಯಾಹ್ನ 01:30 ಗಂಟೆಗೆ ಲೋಕಮಾನ್ಯ ತಿಲಕ್ ಟರ್ಮಿನಸ್ ತಲುಪಲಿದೆ. ಈ ರೈಲುಗಳು ಎರಡೂ ದಿಕ್ಕುಗಳಲ್ಲಿ ಒಟ್ಟು 13 ಟ್ರಿಪ್ಗಳನ್ನು ಪೂರೈಸಲಿವೆ.</p><p>ಮಾರ್ಗಮಧ್ಯೆ, ಈ ರೈಲುಗಳು ಠಾಣೆ, ಕಲ್ಯಾಣ್, ಲೋನಾವಾಲಾ, ಪುಣೆ, ಸತಾರಾ, ಕರಾಡ್, ಸಾಂಗ್ಲಿ, ಮಿರಜ್, ರಾಯಬಾಗ್, ಘಟಪ್ರಭಾ, ಬೆಳಗಾವಿ, ಲೋಂಡಾ, ಧಾರವಾಡ, ಎಸ್ಎಸ್ಎಸ್ ಹುಬ್ಬಳ್ಳಿ, ಹಾವೇರಿ, ಹರಿಹರ, ದಾವಣಗೆರೆ, ಚಿಕ್ಕಜಾಜೂರು, ಬೀರೂರು, ಅರಸೀಕೆರೆ ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಲುಗಡೆ ಹೊಂದಲಿವೆ. ಈ ರೈಲು ಎಸಿ, ಸ್ಲೀಪರ್, ಜನರಲ್ ಮತ್ತು ಎಸ್ಎಲ್ಆರ್ಡಿ ಬೋಗಿಗಳನ್ನು ಒಳಗೊಂಡ ಒಟ್ಟು 22 ಬೋಗಿಗಳನ್ನು ಹೊಂದಿರುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೇಸಿಗೆಯ ದಿನಗಳಲ್ಲಿ ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ಮುಂಬೈನ ಲೋಕಮಾನ್ಯ ತಿಲಕ್ ಟರ್ಮಿನಸ್ ಮತ್ತು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ನಡುವೆ ಸಾಪ್ತಾಹಿಕ ವಿಶೇಷ ರೈಲುಗಳನ್ನು ಓಡಿಸುವುದಾಗಿ ಮಧ್ಯ ರೈಲ್ವೆಯು ಸೂಚಿಸಿದೆ.</p><p>ರೈಲು ಸಂಖ್ಯೆ 01013 ಲೋಕಮಾನ್ಯ ತಿಲಕ್ ಟರ್ಮಿನಸ್–ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್, ಬೆಂಗಳೂರು ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲು, ಏಪ್ರಿಲ್ 19 ರಿಂದ ಜುಲೈ 12, 2026 ರವರೆಗೆ ಪ್ರತಿ ಭಾನುವಾರ ಬೆಳಿಗ್ಗೆ 11:50 ಗಂಟೆಗೆ ಲೋಕಮಾನ್ಯ ತಿಲಕ್ ಟರ್ಮಿನಸ್ ನಿಂದ ಹೊರಟು, ಸೋಮವಾರ ಬೆಳಿಗ್ಗೆ 11:45 ಗಂಟೆಗೆ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ತಲುಪಲಿದೆ. </p><p>ಮರು ಪ್ರಯಾಣದಲ್ಲಿ, ರೈಲು ಸಂಖ್ಯೆ 01014 ಎಸ್ಎಂವಿಟಿ ಬೆಂಗಳೂರು–ಲೋಕಮಾನ್ಯ ತಿಲಕ್ ಟರ್ಮಿನಸ್ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲು, ಏಪ್ರಿಲ್ 20 ರಿಂದ ಜುಲೈ 13, 2026 ರವರೆಗೆ ಪ್ರತಿ ಸೋಮವಾರ ಮಧ್ಯಾಹ್ನ 01:50 ಗಂಟೆಗೆ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ನಿಂದ ಹೊರಟು, ಮಂಗಳವಾರ ಮಧ್ಯಾಹ್ನ 01:30 ಗಂಟೆಗೆ ಲೋಕಮಾನ್ಯ ತಿಲಕ್ ಟರ್ಮಿನಸ್ ತಲುಪಲಿದೆ. ಈ ರೈಲುಗಳು ಎರಡೂ ದಿಕ್ಕುಗಳಲ್ಲಿ ಒಟ್ಟು 13 ಟ್ರಿಪ್ಗಳನ್ನು ಪೂರೈಸಲಿವೆ.</p><p>ಮಾರ್ಗಮಧ್ಯೆ, ಈ ರೈಲುಗಳು ಠಾಣೆ, ಕಲ್ಯಾಣ್, ಲೋನಾವಾಲಾ, ಪುಣೆ, ಸತಾರಾ, ಕರಾಡ್, ಸಾಂಗ್ಲಿ, ಮಿರಜ್, ರಾಯಬಾಗ್, ಘಟಪ್ರಭಾ, ಬೆಳಗಾವಿ, ಲೋಂಡಾ, ಧಾರವಾಡ, ಎಸ್ಎಸ್ಎಸ್ ಹುಬ್ಬಳ್ಳಿ, ಹಾವೇರಿ, ಹರಿಹರ, ದಾವಣಗೆರೆ, ಚಿಕ್ಕಜಾಜೂರು, ಬೀರೂರು, ಅರಸೀಕೆರೆ ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಲುಗಡೆ ಹೊಂದಲಿವೆ. ಈ ರೈಲು ಎಸಿ, ಸ್ಲೀಪರ್, ಜನರಲ್ ಮತ್ತು ಎಸ್ಎಲ್ಆರ್ಡಿ ಬೋಗಿಗಳನ್ನು ಒಳಗೊಂಡ ಒಟ್ಟು 22 ಬೋಗಿಗಳನ್ನು ಹೊಂದಿರುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>