‘ಮಧ್ಯಪ್ರದೇಶದ ಇಂದೋರ್ನಲ್ಲಿ ಕಳೆದ ವರ್ಷ ಮುನ್ರೋ ಕೆಫೆಯಲ್ಲಿ ಕಾರ್ಯಕ್ರಮ ನಡೆಸಿಕೊಟ್ಟಿದ್ದ ಮುನವ್ವರ್, ಧರ್ಮ, ದೇವತೆಗಳು ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದರು. ಈ ಸಂಬಂಧ ಅವರನ್ನು ಬಂಧಿಸಲಾಗಿತ್ತು. 37 ದಿನ ಜೈಲಿನಲ್ಲಿದ್ದು, ಜಾಮೀನಿನ ಮೇಲೆ ಹೊರಬಂದಿದ್ದರು. ಇದಾದ ನಂತರ, ಹಲವೆಡೆ ಅವರ ಕಾರ್ಯಕ್ರಮಗಳಿಗೆ ನಿರ್ಬಂಧ ಹೇರಲಾಗಿತ್ತು’ ಎಂದು ತಿಳಿಸಿವೆ.