<p>ಬೆಂಗಳೂರು: ‘ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರಸಭೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಗುತ್ತಿಗೆ ಪೌರಕಾರ್ಮಿಕನ ಕೊಲೆ ಪ್ರಕರಣ ಆಘಾತಕಾರಿ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು‘ ಎಂದು ರಾಜ್ಯ ಮುನ್ಸಿಪಲ್ ಕಾರ್ಮಿಕರ ಸಂಘ ಒತ್ತಾಯಿಸಿದೆ.</p>.<p>’ಮಾಸ್ಕ್ ಧರಿಸಿ ಎಂದು ಹೇಳಿದ್ದಕ್ಕೆ ಪೌರಕಾರ್ಮಿಕ ಸುನೀಲ್ (24) ಎಂಬುವರ ಮೇಲೆ ಕೆಲವು ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ. ಅಲ್ಲದೆ, ಮಾರಕಾಸ್ತ್ರಗಳಿಂದ ಇರಿದಿದ್ದರಿಂದ ಸುನೀಲ್ ಮೃತಪಟ್ಟಿದ್ದಾರೆ. ಅವರ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಬೇಕು ಹಾಗೂ ಅವರ ಅವಲಂಬಿತರೊಬ್ಬರಿಗೆ ಸರ್ಕಾರಿ ಉದ್ಯೋಗ ನೀಡಬೇಕು‘ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಸೈಯದ್ ಮುಜೀಬ್ ಆಗ್ರಹಿಸಿದ್ದಾರೆ.</p>.<p>’ಘಟನೆಯಲ್ಲಿ ಗಾಯಗೊಂಡಿರುವ ಶ್ರೀಕಂಠ ಎಂಬುವರಿಗೆ ಉತ್ತಮ ಚಿಕಿತ್ಸೆ ನೀಡಬೇಕು ಮತ್ತು ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಬೇಕು‘ ಎಂದೂ ಅವರು ಒತ್ತಾಯಿಸಿದ್ದಾರೆ.</p>.<p>’ಕೋವಿಡ್ ಶವಗಳ ಸಂಸ್ಕಾರ, ಸೋಂಕಿತರ ಮನೆಗಳಿಗೆ ಔಷಧಿ ಸಿಂಪಡಿಸುವ ಕೆಲಸಕ್ಕೆ ತಾತ್ಕಾಲಿಕ ಟೆಂಡರ್ ಮೂಲಕ ಪ್ರತ್ಯೇಕ ಕಾರ್ಮಿಕರನ್ನು ತಕ್ಷಣವೇ ನೇಮಿಸಬೇಕು. ಪಿಪಿಇ ಕಿಟ್ಗಳನ್ನು ಹಾಗೂ ಗ್ಲೌಸ್, ಮಾಸ್ಕ್, ಫೇಸ್ಶೀಲ್ಡ್, ಸ್ಯಾನಿಟೈಸರ್ ನೀಡದೆ ಈ ಕೆಲಸದಲ್ಲಿ ಪೌರಕಾರ್ಮಿಕರನ್ನು ನಿಯೋಜಿಸಬಾರದು‘ ಎಂದು ಸಂಘದ ಅಧ್ಯಕ್ಷ ಹರೀಶ್ ನಾಯಕ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ‘ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರಸಭೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಗುತ್ತಿಗೆ ಪೌರಕಾರ್ಮಿಕನ ಕೊಲೆ ಪ್ರಕರಣ ಆಘಾತಕಾರಿ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು‘ ಎಂದು ರಾಜ್ಯ ಮುನ್ಸಿಪಲ್ ಕಾರ್ಮಿಕರ ಸಂಘ ಒತ್ತಾಯಿಸಿದೆ.</p>.<p>’ಮಾಸ್ಕ್ ಧರಿಸಿ ಎಂದು ಹೇಳಿದ್ದಕ್ಕೆ ಪೌರಕಾರ್ಮಿಕ ಸುನೀಲ್ (24) ಎಂಬುವರ ಮೇಲೆ ಕೆಲವು ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ. ಅಲ್ಲದೆ, ಮಾರಕಾಸ್ತ್ರಗಳಿಂದ ಇರಿದಿದ್ದರಿಂದ ಸುನೀಲ್ ಮೃತಪಟ್ಟಿದ್ದಾರೆ. ಅವರ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಬೇಕು ಹಾಗೂ ಅವರ ಅವಲಂಬಿತರೊಬ್ಬರಿಗೆ ಸರ್ಕಾರಿ ಉದ್ಯೋಗ ನೀಡಬೇಕು‘ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಸೈಯದ್ ಮುಜೀಬ್ ಆಗ್ರಹಿಸಿದ್ದಾರೆ.</p>.<p>’ಘಟನೆಯಲ್ಲಿ ಗಾಯಗೊಂಡಿರುವ ಶ್ರೀಕಂಠ ಎಂಬುವರಿಗೆ ಉತ್ತಮ ಚಿಕಿತ್ಸೆ ನೀಡಬೇಕು ಮತ್ತು ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಬೇಕು‘ ಎಂದೂ ಅವರು ಒತ್ತಾಯಿಸಿದ್ದಾರೆ.</p>.<p>’ಕೋವಿಡ್ ಶವಗಳ ಸಂಸ್ಕಾರ, ಸೋಂಕಿತರ ಮನೆಗಳಿಗೆ ಔಷಧಿ ಸಿಂಪಡಿಸುವ ಕೆಲಸಕ್ಕೆ ತಾತ್ಕಾಲಿಕ ಟೆಂಡರ್ ಮೂಲಕ ಪ್ರತ್ಯೇಕ ಕಾರ್ಮಿಕರನ್ನು ತಕ್ಷಣವೇ ನೇಮಿಸಬೇಕು. ಪಿಪಿಇ ಕಿಟ್ಗಳನ್ನು ಹಾಗೂ ಗ್ಲೌಸ್, ಮಾಸ್ಕ್, ಫೇಸ್ಶೀಲ್ಡ್, ಸ್ಯಾನಿಟೈಸರ್ ನೀಡದೆ ಈ ಕೆಲಸದಲ್ಲಿ ಪೌರಕಾರ್ಮಿಕರನ್ನು ನಿಯೋಜಿಸಬಾರದು‘ ಎಂದು ಸಂಘದ ಅಧ್ಯಕ್ಷ ಹರೀಶ್ ನಾಯಕ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>