‘ಆಂಧ್ರಪ್ರದೇಶದ ಪವನ್ (27) ಹಾಗೂ ಪ್ರಕಾಶ್ (22) ಬಂಧಿತರು. ಒಟ್ಟು 36 ಪಕ್ಷಿಗಳನ್ನು ಪಂಜರದಲ್ಲಿ ಇಟ್ಟುಕೊಂಡಿದ್ದ ಆರೋಪಿಗಳು ಭುವನೇಶ್ವರಿ ನಗರ ಬಸ್ ನಿಲ್ದಾಣದ ಬಳಿ ಅವುಗಳನ್ನು ಮಾರಲು ಮುಂದಾಗಿದ್ದರು. ಈ ವೇಳೆ ದಾಳಿ ನಡೆಸಲಾಗಿತ್ತು. ಎಲ್ಲ ಪಕ್ಷಿಗಳನ್ನು ರಕ್ಷಿಸಲಾಗಿದ್ದು, ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.