‘ತಮಿಳು ಭಾಷಿಕರು ಮತ್ತು ಕನ್ನಡಿಗರ ಮಧ್ಯೆ ಸಂಘರ್ಷಕ್ಕೆ ಎಡೆ ಮಾಡುವಂಥ ಪ್ರಚೋದನಾಕಾರಿ ಭಾಷಣ ಮಾಡಿರುವ ಮುನಿರತ್ನ, ಅಲ್ಪಸಂಖ್ಯಾತ ಕ್ರೈಸ್ತ ಸಮುದಾಯದವರನ್ನು ಹೊಡೆದು ಓಡಿಸಿ ಎಂಬುದಾಗಿ ಮಾತನಾಡಿದ್ದಾರೆ. ಕೋಮುದ್ವೇಷದ ಹೇಳಿಕೆನೀಡಿ ಸಮುದಾಯದ ಗೌರವ ಹಾಗೂ ಹಕ್ಕುಗಳಿಗೆ ಚ್ಯುತಿ ತಂದಿದ್ದಾರೆ’ ಎಂಬುದಾಗಿ ದೂರು ದಾರರು ಆರೋಪಿಸಿದ್ದಾರೆ. ಮುನಿರತ್ನ ಅವರ ಭಾಷಣದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು. ಅದನ್ನೂ ಪುರಾವೆಯಾಗಿ ಪರಿಗಣಿಸಲಾಗಿದೆ. ಮುನಿರತ್ನ ವಿಚಾರಣೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಮೂಲಗಳು ಹೇಳಿವೆ.