ಬೆಂಗಳೂರು: ‘2018ರ ವಿಧಾನಸಭಾ ಚುನಾವಣೆಯಲ್ಲಿ ರಾಜರಾಜೇಶ್ವರಿನಗರ ಕ್ಷೇತ್ರದ ಕಾಂಗ್ರೆಸ್ನ ವಿಜೇತ ಅಭ್ಯರ್ಥಿ ಎನ್. ಮುನಿರತ್ನ (ಸದ್ಯ ಅನರ್ಹ ಶಾಸಕ) ಚುನಾವಣಾ ಅಕ್ರಮ ಎಸಗಿದ್ದು, ಅವರ ಆಯ್ಕೆಯನ್ನು ಅಸಿಂಧುಗೊಳಿಸಿ ನನ್ನನ್ನೇ ಆಯ್ಕೆ ಮಾಡಬೇಕು’ ಎಂದು ಕೋರಿ ತುಳಸಿ ಮುನಿರಾಜುಗೌಡ ಸಲ್ಲಿಸಿರುವ ಮಧ್ಯಂತರ ಮನವಿಯನ್ನು ವಜಾ ಮಾಡಿರುವ ಹೈಕೋರ್ಟ್, ತಿದ್ದುಪಡಿ ಮಾಡಿದ ಮೂಲ ದಾವೆ ವಿಚಾರಣೆಗೆ ಸಮ್ಮತಿಸಿದೆ.