ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಸ್.ಆರ್. ವಿಶ್ವನಾಥ್, ಬಿಜೆಪಿ ಬೆಂಗಳೂರು ನಗರ ಘಟಕದ ಪ್ರಧಾನ ಕಾರ್ಯದರ್ಶಿ ರಾಜಣ್ಣ ಸೇರಿದಂತೆ ಪಕ್ಷದ ಮುಖಂಡರ ಜತೆ ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಜಾಲಹ
ಳ್ಳಿಯ ಹಲವೆಡೆ ಪ್ರಚಾರ ನಡೆಸಿದರು. ಪ್ರಮುಖ ರಸ್ತೆಗಳಲ್ಲಿ ತೆರೆದ ವಾಹನಗಳಲ್ಲಿ ಸಾಗಿದ ಅವರು, ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರನ್ನು ಬೆಂಬಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.