ಬೆಂಗಳೂರು: ‘ಅನರ್ಹ ಶಾಸಕ ಮುನಿರತ್ನ ಅವರಿಗೆ ಅನ್ಯಾಯ ಆಗುವುದಿಲ್ಲ. ಅವರಿಗೆ ಟಿಕೆಟ್ ನೀಡುವ ಬಗ್ಗೆ ಪಕ್ಷದ ವರಿಷ್ಠರು ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತಾರೆ’ ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದರು.
ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಬೇರೆ ಪಕ್ಷಗಳಿಂದ ಬಂದವರ ಸಹಕಾರ ಇದೆ. ಈ ರೀತಿ ಬಂದವರಿಗೆ ಅನ್ಯಾಯವಾಗುವುದಿಲ್ಲ’ ಎಂದು ಅಭಿಪ್ರಾಯಪಟ್ಟರು.