‘ಜಯನಗರದ 7ನೇ ಹಂತದಲ್ಲಿ ಓಡಾಡಿಕೊಂಡಿದ್ದ ವ್ಯಕ್ತಿ, ಎಲ್ಲೆಂದರಲ್ಲಿ ಮಲಗುತ್ತಿದ್ದ. ಸೋಮವಾರ ರಾತ್ರಿ ವ್ಯಕ್ತಿಯೊಬ್ಬನ ಜತೆಗೆ ಗಲಾಟೆ ಮಾಡಿಕೊಂಡಿದ್ದ ಎಂಬುದು ಸ್ಥಳೀಯರಿಂದ ಗೊತ್ತಾಗಿದೆ. ಬಳಿಕ ರಸ್ತೆ ಬದಿ ಮಲಗಿದ್ದ. ತಡರಾತ್ರಿ ಭಾರಿ ಮಳೆ ಸುರಿಯುತ್ತಿದ್ದರಿಂದ ಅಂಗಡಿ ಮುಂಭಾಗ ಮಲಗಿದ್ದಾನೆ. ಈ ವೇಳೆ ಆತನ ಮೇಲೆ ಕಿಡಿಗೇಡಿಗಳು ಕಲ್ಲು ಎತ್ತಿಹಾಕಿ ಕೊಲೆ ಮಾಡಿ ಪರಾರಿ ಆಗಿದ್ದಾರೆ. ವಿಚಾರ ತಿಳಿದು ಘಟನಾ ಸ್ಥಳಕ್ಕೆ ಭೇಟಿ ಪರಿಶೀಲಿಸಲಾಯಿತು. ಮೃತದೇಹವನ್ನು ಶವಾಗಾರದಲ್ಲಿ ಇಡಲಾಗಿದೆ. ವ್ಯಕ್ತಿಯ ಕುಟುಂಬಸ್ಥರು ಪತ್ತೆಯಾದ ಮೇಲೆ ಮೃತದೇಹ ಹಸ್ತಾಂತರ ಮಾಡಲಾಗುವುದು’ ಎಂದು ಪೊಲೀಸರು ತಿಳಿಸಿದರು.