‘ಅಪರಾಧ ಹಿನ್ನೆಲೆಯುಳ್ಳವರ ಪತ್ತೆಗಾಗಿ ನಗರದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಲಾಗಿತ್ತು. ನಗರದ ಬಾರ್ಗಳಿಗೆ ತೆರಳಿ, ಉಪಕರಣ ಸಹಾಯದಿಂದ ಅಲ್ಲಿದ್ದವರ ಬೆರಳಚ್ಚು ಪಡೆದು ಪರಿಶೀಲಿಸಲಾಗಿತ್ತು. ಇದೇ ಸಂದರ್ಭದಲ್ಲಿ ಆರೋಪಿ ಚೇತನ್ ಬಗ್ಗೆ ಮಾಹಿತಿ ಲಭ್ಯವಾಯಿತು. ವಶಕ್ಕೆ ಪಡೆದು ವಿಚಾರಿಸಿದಾಗ, ಕೊಲೆ ಯತ್ನ ಪ್ರಕರಣದ ಆರೋಪಿ ಎಂಬುದು ತಿಳಿಯಿತು’ ಎಂದು ಪೊಲೀಸರು ವಿವರಿಸಿದರು.