‘ಮಧು ಆಗಾಗ್ಗೆ ಪತಿ ಜತೆ ಮನೆಗೆ ಬಂದು ಹೋಗುತ್ತಿದ್ದ. ಅವರ ಸಂಬಂಧಿ ಎಂಬ ಕಾರಣಕ್ಕೆ ನಾನೂ ಸಲುಗೆಯಿಂದಲೇ ಮಾತನಾಡಿಸುತ್ತಿದ್ದೆ. ಆದರೆ, ಈ ನಡುವೆ ಆತನ ವರ್ತನೆಯಲ್ಲಿ ಬದಲಾವಣೆ ಆಗಿತ್ತು. ‘ನಿನ್ನನ್ನು ಕಂಡರೆ ನನಗೆ ಇಷ್ಟ. ನೀನು ನನ್ನ ಜತೆ ಸಂಬಂಧ ಇಟ್ಟುಕೊಳ್ಳಬೇಕು. ಕರೆದ ಕಡೆ ಎಲ್ಲ ಬರಬೇಕು. ಇಲ್ಲದಿದ್ದರೆ ನಿನ್ನ ನಡತೆ ಸರಿಯಿಲ್ಲವೆಂದು ಮೋಹನ್ಗೆ ಹೇಳಿ ಸಂಸಾರ ಹಾಳು ಮಾಡುತ್ತೇನೆ’ ಎಂದು ಬೆದರಿಸುತ್ತಿದ್ದ. ಈ ವಿಷಯವನ್ನು ಪತಿಗೆ ಹೇಳಿದರೆ ತಪ್ಪು ತಿಳಿದುಕೊಳ್ಳುತ್ತಾರೆ ಎಂದು ನಾನೂ ಸುಮ್ಮನೇ ಇದ್ದೆ. ಆದರೆ, ದಿನೇ ದಿನೇ ಕಿರುಕುಳ ಹೆಚ್ಚುತ್ತಲೇ ಹೋಯಿತು’ ಎಂದು ರಮ್ಯಾ ಹೇಳಿಕೆ ಕೊಟ್ಟಿದ್ದಾಗಿ ಪೊಲೀಸರು ಹೇಳಿದರು.