<p><strong>ಬೆಂಗಳೂರು:</strong> ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಘಟನೆ ಪುಲಕೇಶಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡಗುಂಟೆಯಲ್ಲಿ ಬುಧವಾರ ನಡೆದಿದೆ.</p>.<p>ಬಾಣಸವಾಡಿ ನಿವಾಸಿ ಅಜಿತ್ (35) ಕೊಲೆಯಾದವರು.</p>.<p>‘ಅಜಿತ್ ಅವರು ಐಟಿಸಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಬುಧವಾರ ಬೆಳಿಗ್ಗೆ ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ನಾಲ್ಕೈದು ಜನರಿದ್ದ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದೆ’ ಎಂದು ಪೊಲೀಸರು ತಿಳಿಸಿದರು.</p>.<p>‘ಅಜಿತ್ ಅವರು ಬಹಳಷ್ಟು ಜನರ ಬಳಿ ಬಡ್ಡಿಗೆ ಹಣ ಪಡೆದು ವಾಪಸ್ ಕೊಡದೇ ಸತಾಯಿಸುತ್ತಿದ್ದರು. ಇದೇ ಕಾರಣಕ್ಕೆ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ’ ಎಂದು ಹೇಳಿದರು.</p>.<p>ಘಟನಾ ಸ್ಥಳಕ್ಕೆ ಪುಲಕೇಶಿನಗರ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ‘ಕೊಲೆಯಾಗಿರುವ ಸ್ಥಳದ ಅಕ್ಕಪಕ್ಕದ ಸಿ.ಸಿ.ಟಿ.ವಿ. ಕ್ಯಾಮೆರಾಗಳನ್ನು ಪರಿಶೀಲಿಸುತ್ತಿದ್ದಾರೆ. ಈ ಬಗ್ಗೆ ಕೊಲೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಶೋಧ ಕಾರ್ಯ ಕೈಗೊಳ್ಳಲಾಗಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಘಟನೆ ಪುಲಕೇಶಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡಗುಂಟೆಯಲ್ಲಿ ಬುಧವಾರ ನಡೆದಿದೆ.</p>.<p>ಬಾಣಸವಾಡಿ ನಿವಾಸಿ ಅಜಿತ್ (35) ಕೊಲೆಯಾದವರು.</p>.<p>‘ಅಜಿತ್ ಅವರು ಐಟಿಸಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಬುಧವಾರ ಬೆಳಿಗ್ಗೆ ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ನಾಲ್ಕೈದು ಜನರಿದ್ದ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದೆ’ ಎಂದು ಪೊಲೀಸರು ತಿಳಿಸಿದರು.</p>.<p>‘ಅಜಿತ್ ಅವರು ಬಹಳಷ್ಟು ಜನರ ಬಳಿ ಬಡ್ಡಿಗೆ ಹಣ ಪಡೆದು ವಾಪಸ್ ಕೊಡದೇ ಸತಾಯಿಸುತ್ತಿದ್ದರು. ಇದೇ ಕಾರಣಕ್ಕೆ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ’ ಎಂದು ಹೇಳಿದರು.</p>.<p>ಘಟನಾ ಸ್ಥಳಕ್ಕೆ ಪುಲಕೇಶಿನಗರ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ‘ಕೊಲೆಯಾಗಿರುವ ಸ್ಥಳದ ಅಕ್ಕಪಕ್ಕದ ಸಿ.ಸಿ.ಟಿ.ವಿ. ಕ್ಯಾಮೆರಾಗಳನ್ನು ಪರಿಶೀಲಿಸುತ್ತಿದ್ದಾರೆ. ಈ ಬಗ್ಗೆ ಕೊಲೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಶೋಧ ಕಾರ್ಯ ಕೈಗೊಳ್ಳಲಾಗಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>