<p><strong>ಬೆಂಗಳೂರು: </strong>ಬಂಡೇಪಾಳ್ಯ ಠಾಣೆಯ ವ್ಯಾಪ್ತಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದ ಮುನಿರಾಜು (50) ಎಂಬುವರ ಮರಣೋತ್ತರ ಪರೀಕ್ಷೆ ವರದಿ ಬಂದಿದ್ದು, ಚೂರಿಯಿಂದ ಇರಿದು ಅವರನ್ನು ಕೊಲೆ ಮಾಡಿರುವ ಸಂಗತಿ ಬಹಿರಂಗವಾಗಿದೆ.</p>.<p>ಮಂಗಮ್ಮನಪಾಳ್ಯ ಕೆರೆ ಬಳಿ ಮೇ 20ರಂದು ಮನಿರಾಜು ಮೃತದೇಹ ಸಿಕ್ಕಿತ್ತು. ಅಸಹಜ ಸಾವೆಂದು ತಿಳಿದ ಸಂಬಂಧಿಕರು, ಮೃತದೇಹವನ್ನು ಮನೆಗೆ ತೆಗೆದುಕೊಂಡು ಹೋಗಿದ್ದರು. ಅಂತಿಮ ವಿಧಿವಿಧಾನ ಮುಗಿಸಿ ಅಂತ್ಯಸಂಸ್ಕಾರ ಮಾಡಲು ಸ್ಮಶಾನಕ್ಕೂ ತೆರಳಿದ್ದರು.</p>.<p>ಬಾತ್ಮೀದಾರರೊಬ್ಬರು ನೀಡಿದ್ದ ಮಾಹಿತಿಯಂತೆ ಸ್ಮಶಾನಕ್ಕೆ ಹೋಗಿದ್ದ ಪೊಲೀಸರು, ಮೃತದೇಹವನ್ನು ಪರೀಕ್ಷಿಸಿದಾಗ ದೇಹದ ಹಲವೆಡೆ ಗಾಯದ ಗುರುತುಗಳಿದ್ದವು. ಪೊಲೀಸರು ಕೊಲೆ ಅನುಮಾನ ವ್ಯಕ್ತಪಡಿಸಿ ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಿ ಮರಣೋತ್ತರ ಪರೀಕ್ಷೆ ಮಾಡಿಸಿದ್ದರು.</p>.<p>‘ಮುನಿರಾಜು ಅವರನ್ನು ಮೇ 19ರಂದು ದುಷ್ಕರ್ಮಿಗಳು ಕೊಲೆ ಮಾಡಿ ಕೆರೆ ಬಳಿ ಮೃತದೇಹ ಎಸೆದು ಹೋಗಿದ್ದಾರೆ. ಮರುದಿನವೇ ಸಂಬಂಧಿಕರು ಮೃತದೇಹವನ್ನು ಮನೆಗೆ ತಂದು ರಕ್ತದ ಕಲೆಗಳಿದ್ದ ಬಟ್ಟೆ ಬದಲಾಯಿಸಿ ಅಂತ್ಯಸಂಸ್ಕಾರ ಮಾಡಲು ಮುಂದಾಗಿದ್ದರು’ ಎಂದು ಪೊಲೀಸರು ಹೇಳಿದರು.</p>.<p class="Subhead"><strong>ಕೂಲಿ ಕೆಲಸ:</strong> ‘ಮುನಿರಾಜು ಮತ್ತು ಅವರ ಪತ್ನಿ, ಮಂಗಮ್ಮನಪಾಳ್ಯದ ದೊಡ್ಡಮ್ಮ ದೇವಸ್ಥಾನದ ಸಮೀಪ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಕೂಲಿ ಕೆಲಸ ಮಾಡುತ್ತಿದ್ದ ದಂಪತಿಗೆ ಒಬ್ಬ ಮಗನಿದ್ದಾನೆ. ಮದ್ಯವ್ಯಸನಿಯಾಗಿದ್ದ ಮುನಿರಾಜು, ಇತ್ತೀಚೆಗೆ ಕೆಲಸಕ್ಕೆ ಹೋಗುತ್ತಿರಲಿಲ್ಲ’ ಎಂದು ಪೊಲಿಸರು ಹೇಳಿದರು.</p>.<p>‘ಕುಡಿದ ಅಮಲಿನಲ್ಲಿ ಕೆರೆ ಅಂಗಳದಲ್ಲಿ ಬಿದ್ದು ಮುನಿರಾಜು ಮೃತಪಟ್ಟಿರಬಹುದೆಂದು ತಿಳಿದು ಅಂತ್ಯಸಂಸ್ಕಾರ ಮಾಡಲು ತಯಾರಿ ಮಾಡಿದ್ದಾಗಿ ಸಂಬಂಧಿಕರು ಹೇಳುತ್ತಿದ್ದಾರೆ. ತನಿಖೆಯಿಂದಲೇ ಕೊಲೆಗೆ ಕಾರಣವೇನು ಹಾಗೂ ಆರೋಪಿಗಳ ಬಗ್ಗೆ ನಿಖರ ಮಾಹಿತಿ ತಿಳಿಯಬೇಕಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಬಂಡೇಪಾಳ್ಯ ಠಾಣೆಯ ವ್ಯಾಪ್ತಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದ ಮುನಿರಾಜು (50) ಎಂಬುವರ ಮರಣೋತ್ತರ ಪರೀಕ್ಷೆ ವರದಿ ಬಂದಿದ್ದು, ಚೂರಿಯಿಂದ ಇರಿದು ಅವರನ್ನು ಕೊಲೆ ಮಾಡಿರುವ ಸಂಗತಿ ಬಹಿರಂಗವಾಗಿದೆ.</p>.<p>ಮಂಗಮ್ಮನಪಾಳ್ಯ ಕೆರೆ ಬಳಿ ಮೇ 20ರಂದು ಮನಿರಾಜು ಮೃತದೇಹ ಸಿಕ್ಕಿತ್ತು. ಅಸಹಜ ಸಾವೆಂದು ತಿಳಿದ ಸಂಬಂಧಿಕರು, ಮೃತದೇಹವನ್ನು ಮನೆಗೆ ತೆಗೆದುಕೊಂಡು ಹೋಗಿದ್ದರು. ಅಂತಿಮ ವಿಧಿವಿಧಾನ ಮುಗಿಸಿ ಅಂತ್ಯಸಂಸ್ಕಾರ ಮಾಡಲು ಸ್ಮಶಾನಕ್ಕೂ ತೆರಳಿದ್ದರು.</p>.<p>ಬಾತ್ಮೀದಾರರೊಬ್ಬರು ನೀಡಿದ್ದ ಮಾಹಿತಿಯಂತೆ ಸ್ಮಶಾನಕ್ಕೆ ಹೋಗಿದ್ದ ಪೊಲೀಸರು, ಮೃತದೇಹವನ್ನು ಪರೀಕ್ಷಿಸಿದಾಗ ದೇಹದ ಹಲವೆಡೆ ಗಾಯದ ಗುರುತುಗಳಿದ್ದವು. ಪೊಲೀಸರು ಕೊಲೆ ಅನುಮಾನ ವ್ಯಕ್ತಪಡಿಸಿ ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಿ ಮರಣೋತ್ತರ ಪರೀಕ್ಷೆ ಮಾಡಿಸಿದ್ದರು.</p>.<p>‘ಮುನಿರಾಜು ಅವರನ್ನು ಮೇ 19ರಂದು ದುಷ್ಕರ್ಮಿಗಳು ಕೊಲೆ ಮಾಡಿ ಕೆರೆ ಬಳಿ ಮೃತದೇಹ ಎಸೆದು ಹೋಗಿದ್ದಾರೆ. ಮರುದಿನವೇ ಸಂಬಂಧಿಕರು ಮೃತದೇಹವನ್ನು ಮನೆಗೆ ತಂದು ರಕ್ತದ ಕಲೆಗಳಿದ್ದ ಬಟ್ಟೆ ಬದಲಾಯಿಸಿ ಅಂತ್ಯಸಂಸ್ಕಾರ ಮಾಡಲು ಮುಂದಾಗಿದ್ದರು’ ಎಂದು ಪೊಲೀಸರು ಹೇಳಿದರು.</p>.<p class="Subhead"><strong>ಕೂಲಿ ಕೆಲಸ:</strong> ‘ಮುನಿರಾಜು ಮತ್ತು ಅವರ ಪತ್ನಿ, ಮಂಗಮ್ಮನಪಾಳ್ಯದ ದೊಡ್ಡಮ್ಮ ದೇವಸ್ಥಾನದ ಸಮೀಪ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಕೂಲಿ ಕೆಲಸ ಮಾಡುತ್ತಿದ್ದ ದಂಪತಿಗೆ ಒಬ್ಬ ಮಗನಿದ್ದಾನೆ. ಮದ್ಯವ್ಯಸನಿಯಾಗಿದ್ದ ಮುನಿರಾಜು, ಇತ್ತೀಚೆಗೆ ಕೆಲಸಕ್ಕೆ ಹೋಗುತ್ತಿರಲಿಲ್ಲ’ ಎಂದು ಪೊಲಿಸರು ಹೇಳಿದರು.</p>.<p>‘ಕುಡಿದ ಅಮಲಿನಲ್ಲಿ ಕೆರೆ ಅಂಗಳದಲ್ಲಿ ಬಿದ್ದು ಮುನಿರಾಜು ಮೃತಪಟ್ಟಿರಬಹುದೆಂದು ತಿಳಿದು ಅಂತ್ಯಸಂಸ್ಕಾರ ಮಾಡಲು ತಯಾರಿ ಮಾಡಿದ್ದಾಗಿ ಸಂಬಂಧಿಕರು ಹೇಳುತ್ತಿದ್ದಾರೆ. ತನಿಖೆಯಿಂದಲೇ ಕೊಲೆಗೆ ಕಾರಣವೇನು ಹಾಗೂ ಆರೋಪಿಗಳ ಬಗ್ಗೆ ನಿಖರ ಮಾಹಿತಿ ತಿಳಿಯಬೇಕಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>