ಬೆಂಗಳೂರು: ಯುವಕನ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ ಘಟನೆ ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿ ಶಿವಪುರ ಕೆರೆಯ ಹಿಂಭಾಗದ ನಿರ್ಜನ ಪ್ರದೇಶದಲ್ಲಿ ಶನಿವಾರ ತಡರಾತ್ರಿ ನಡೆದಿದೆ.
ಮೃತನನ್ನು ಸ್ಥಳೀಯ ನಿವಾಸಿ, ಗಾರ್ಮೆಂಟ್ ಕಾರ್ಮಿಕ ಕಿರಣ್ ಕುಮಾರ್ (26) ಎಂದು ಗುರುತಿಸಲಾಗಿದೆ. ಭಾನುವಾರ ಬೆಳಿಗ್ಗೆ ಸ್ಥಳೀಯರು ಮೃತದೇಹ ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತದೇಹವನ್ನು ಸಪ್ತಗಿರಿ ಪೊಲೀಸ್ ಠಾಣೆಯಲ್ಲಿ ಇಡಲಾಗಿದೆ.
‘ಮೃತದೇಹ ಪತ್ತೆಯಾದ ಸ್ಥಳದಲ್ಲಿ ಬಿಯರ್ ಬಾಟಲಿಗಳು ಸಿಕ್ಕಿವೆ. ಪರಿಚಿತರೆಲ್ಲರೂ ಸೇರಿ ರಾತ್ರಿ ಪಾರ್ಟಿ ಮಾಡಿರಬೇಕು. ಈ ವೇಳೆ, ಜಗಳ ನಡೆದು ಕೊಲೆ ಮಾಡಿರುವ ಶಂಕೆ ಇದೆ. ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ’ ಎಂದು ಪೊಲೀಸರು ತಿಳಿಸಿದರು.