‘ಕೀಟನಾಶಕ ಮಾರಾಟ ಅಂಗಡಿ ಇಟ್ಟುಕೊಂಡಿದ್ದ ವೆಂಕಟೇಶ್ 2020ರ ಫೆ. 14ರಂದು ಮೃತಪಟ್ಟಿದ್ದರು. ಮೃತದೇಹದ ಮೇಲೆ ಯಾವುದೇ ಗಾಯಗಳು ಇರಲಿಲ್ಲ. ಸ್ಥಳದಲ್ಲಿ ಯಾವುದೇ ರಕ್ತದ ಕಲೆಯೂ ಕಂಡಿರಲಿಲ್ಲ. ಹೀಗಾಗಿ, ಇದೊಂದು ಅಸಹಜ ಸಾವೆಂದು ಭಾವಿಸಲಾಗಿತ್ತು. ಇತ್ತೀಚೆಗೆ ಮರಣೋತ್ತರ ಪರೀಕ್ಷೆ ವರದಿ ಬಂದಿದ್ದು, ಇದೊಂದು ಕೊಲೆ ಎಂಬುದು ಖಾತ್ರಿಯಾಗಿದೆ. ಆರೋಪಿ ಹರೀಶ್ನನ್ನು ಬಂಧಿಸಿ ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದೆ’ ಎಂದು ಬ್ಯಾಡರಹಳ್ಳಿ ಪೊಲೀಸ್ ಮೂಲಗಳು ಹೇಳಿವೆ.