ಗೆದ್ದಲಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದ ಗೌರಿ, ಮನೆ ಕೆಲಸ ಮಾಡಿಕೊಂಡಿದ್ದರು.5–6 ವರ್ಷಗಳಿಂದ ಗೌರಿ ಅವರಿಗೆ ಲಕ್ಷ್ಮೀನಾರಾಯಣನ ಪರಿಚಯವಿತ್ತು. ಆತ ಆಗಾಗ ಗೌರಿ ಮನೆಗೂ ಹೋಗುತ್ತಿದ್ದ. ಈ ಮಧ್ಯೆ ಗೌರಿ ಬಳಿ ಇದ್ದ ಚಿನ್ನಾಭರಣವನ್ನು ಪಡೆದಿದ್ದ ಆತ, ಅದನ್ನು ಗಿರವಿ ಅಂಗಡಿಯಲ್ಲಿ ಒತ್ತೆ ಇಟ್ಟಿದ್ದ. ಈ ವಿಷಯಕ್ಕೆ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು.