<p><strong>ಬೆಂಗಳೂರು</strong>: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ನಿಂದ ಜಾಮೀನು ಪಡೆದುಕೊಂಡಿರುವ ಎರಡನೇ ಆರೋಪಿ, ನಟ ದರ್ಶನ್ ಅವರು ಸೋಮವಾರ ಮಧ್ಯಾಹ್ನ 57ನೇ ಸಿಸಿಎಚ್ ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಪ್ರಕ್ರಿಯೆಗೆ ಸಂಬಂಧಿಸಿದ ದಾಖಲೆಗಳಿಗೆ ಸಹಿ ಹಾಕಿದರು.</p>.<p>ವೈದ್ಯಕೀಯ ಚಿಕಿತ್ಸೆಗೆಂದು ಕೆಂಗೇರಿಯ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿರುವ ದರ್ಶನ್ ಅವರು ಆಸ್ಪತ್ರೆಯಿಂದ ಕಾರಿನಲ್ಲಿ ನ್ಯಾಯಾಲಯಕ್ಕೆ ಬಂದರು. ಜಾಮೀನು ಷರತ್ತು ಪೊರೈಸಿದರು.</p>.<p>ದರ್ಶನ್ ಪರವಾಗಿ ಸಹೋದರ ದಿನಕರ್ ತೂಗುದೀಪ ಹಾಗೂ ನಟ ಧನ್ವೀರ್ ಅವರು ಶ್ಯೂರಿಟಿ ನೀಡಿದರು. ನ್ಯಾಯಾಧೀಶ ಜೈಶಂಕರ್ ಅವರಿಗೆ ಕೈ ಮುಗಿದ ದರ್ಶನ್, ₹1 ಲಕ್ಷ ಮೌಲ್ಯದ ವೈಯಕ್ತಿಕ ಬಾಂಡ್ಗೆ ಸಹಿ ಹಾಕಿದರು.</p>.<p>ಇದೇ ವೇಳೆ ಮುಟ್ಟುಗೋಲು ಹಾಕಿಕೊಂಡಿದ್ದ ದರ್ಶನ್ ಅವರ ಪಾಸ್ಪೋರ್ಟ್ ವಾಪಸ್ ನೀಡಲು ನ್ಯಾಯಾಲಯ ಸಮ್ಮತಿ ನೀಡಿದೆ. ನ್ಯಾಯಾಲಯದ ಪ್ರಕ್ರಿಯೆ ಪೂರ್ಣಗೊಳಿಸಿದ ದರ್ಶನ್ ಅವರು ಮತ್ತೆ ಬಿಜಿಎಸ್ ಆಸ್ಪತ್ರೆಗೆ ವಾಪಸಾದರು.</p>.<p>ಬಳ್ಳಾರಿ ಜೈಲಿನಲ್ಲಿದ್ದಾಗ ದರ್ಶನ್ ಅವರಿಗೆ ತೀವ್ರವಾದ ಬೆನ್ನು ನೋವು ಕಾಣಿಸಿಕೊಂಡಿತ್ತು. ವೈದ್ಯಕೀಯ ಚಿಕಿತ್ಸೆಗೆಂದು ಹೈಕೋರ್ಟ್ನಿಂದ ಈ ಹಿಂದೆ ಮಧ್ಯಂತರ ಜಾಮೀನು ಪಡೆದುಕೊಂಡಿದ್ದ ದರ್ಶನ್ ಅವರು ಒಂದೂವರೆ ತಿಂಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಡಿ.13ರಂದು ಹೈಕೋರ್ಟ್, ದರ್ಶನ್ ಸೇರಿದಂತೆ ಏಳು ಆರೋಪಿಗಳಿಗೆ ಷರತ್ತುಬದ್ದ ಜಾಮೀನು ಮಂಜೂರು ಮಾಡಿತ್ತು. ಇಬ್ಬರ ಶ್ಯೂರಿಟಿ, ₹1 ಲಕ್ಷ ಮೌಲ್ಯದ ಬಾಂಡ್, ಸಾಕ್ಷ್ಯ ನಾಶ ಪಡಿಸದಂತೆ ನ್ಯಾಯಾಲಯ ಷರತ್ತು ವಿಧಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ನಿಂದ ಜಾಮೀನು ಪಡೆದುಕೊಂಡಿರುವ ಎರಡನೇ ಆರೋಪಿ, ನಟ ದರ್ಶನ್ ಅವರು ಸೋಮವಾರ ಮಧ್ಯಾಹ್ನ 57ನೇ ಸಿಸಿಎಚ್ ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಪ್ರಕ್ರಿಯೆಗೆ ಸಂಬಂಧಿಸಿದ ದಾಖಲೆಗಳಿಗೆ ಸಹಿ ಹಾಕಿದರು.</p>.<p>ವೈದ್ಯಕೀಯ ಚಿಕಿತ್ಸೆಗೆಂದು ಕೆಂಗೇರಿಯ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿರುವ ದರ್ಶನ್ ಅವರು ಆಸ್ಪತ್ರೆಯಿಂದ ಕಾರಿನಲ್ಲಿ ನ್ಯಾಯಾಲಯಕ್ಕೆ ಬಂದರು. ಜಾಮೀನು ಷರತ್ತು ಪೊರೈಸಿದರು.</p>.<p>ದರ್ಶನ್ ಪರವಾಗಿ ಸಹೋದರ ದಿನಕರ್ ತೂಗುದೀಪ ಹಾಗೂ ನಟ ಧನ್ವೀರ್ ಅವರು ಶ್ಯೂರಿಟಿ ನೀಡಿದರು. ನ್ಯಾಯಾಧೀಶ ಜೈಶಂಕರ್ ಅವರಿಗೆ ಕೈ ಮುಗಿದ ದರ್ಶನ್, ₹1 ಲಕ್ಷ ಮೌಲ್ಯದ ವೈಯಕ್ತಿಕ ಬಾಂಡ್ಗೆ ಸಹಿ ಹಾಕಿದರು.</p>.<p>ಇದೇ ವೇಳೆ ಮುಟ್ಟುಗೋಲು ಹಾಕಿಕೊಂಡಿದ್ದ ದರ್ಶನ್ ಅವರ ಪಾಸ್ಪೋರ್ಟ್ ವಾಪಸ್ ನೀಡಲು ನ್ಯಾಯಾಲಯ ಸಮ್ಮತಿ ನೀಡಿದೆ. ನ್ಯಾಯಾಲಯದ ಪ್ರಕ್ರಿಯೆ ಪೂರ್ಣಗೊಳಿಸಿದ ದರ್ಶನ್ ಅವರು ಮತ್ತೆ ಬಿಜಿಎಸ್ ಆಸ್ಪತ್ರೆಗೆ ವಾಪಸಾದರು.</p>.<p>ಬಳ್ಳಾರಿ ಜೈಲಿನಲ್ಲಿದ್ದಾಗ ದರ್ಶನ್ ಅವರಿಗೆ ತೀವ್ರವಾದ ಬೆನ್ನು ನೋವು ಕಾಣಿಸಿಕೊಂಡಿತ್ತು. ವೈದ್ಯಕೀಯ ಚಿಕಿತ್ಸೆಗೆಂದು ಹೈಕೋರ್ಟ್ನಿಂದ ಈ ಹಿಂದೆ ಮಧ್ಯಂತರ ಜಾಮೀನು ಪಡೆದುಕೊಂಡಿದ್ದ ದರ್ಶನ್ ಅವರು ಒಂದೂವರೆ ತಿಂಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಡಿ.13ರಂದು ಹೈಕೋರ್ಟ್, ದರ್ಶನ್ ಸೇರಿದಂತೆ ಏಳು ಆರೋಪಿಗಳಿಗೆ ಷರತ್ತುಬದ್ದ ಜಾಮೀನು ಮಂಜೂರು ಮಾಡಿತ್ತು. ಇಬ್ಬರ ಶ್ಯೂರಿಟಿ, ₹1 ಲಕ್ಷ ಮೌಲ್ಯದ ಬಾಂಡ್, ಸಾಕ್ಷ್ಯ ನಾಶ ಪಡಿಸದಂತೆ ನ್ಯಾಯಾಲಯ ಷರತ್ತು ವಿಧಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>