<p><strong>ಬೆಂಗಳೂರು:</strong> ಕೆ.ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ಅಸ್ಕರ್ (20) ಎಂಬುವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.</p>.<p>‘ಸ್ಥಳೀಯ ನಿವಾಸಿಯಾದ ಅಸ್ಕರ್ ಕೆಲಸ ಮುಗಿಸಿ ಮನೆಗೆ ಹೊರಟಿದ್ದಾಗಲೇ ಅಡ್ಡಗಟ್ಟಿ ದಾಳಿ ಮಾಡಿದ್ದ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ರಕ್ತದ ಮಡುವಿನಲ್ಲಿದ್ದ ಅಸ್ಕರ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಅವರು ಅಸುನೀಗಿದ್ದಾರೆ’ ಎಂದು ಪೊಲೀಸರು ಹೇಳಿದರು.</p>.<p>‘ಕೊಲೆಯಾದ ಅಸ್ಕರ್ ಹಾಗೂ ಸ್ಥಳೀಯ ನಿವಾಸಿ ತಬ್ರೇಜ್ ಎಂಬಾತನ ನಡುವೆ ಇತ್ತೀಚೆಗಷ್ಟೇ ಜಗಳ ಆಗಿತ್ತು. ತಬ್ರೇಜ್, ಅಸ್ಕರ್ ಕಪಾಳಕ್ಕೆ ಹೊಡೆದಿದ್ದ. ಸ್ಥಳೀಯರು ಜಗಳ ಬಿಡಿಸಿದ್ದರು.’</p>.<p>‘ಕಪಾಳಕ್ಕೆ ಹೊಡೆದ ತಬ್ರೇಜ್ ನನ್ನು ಕೊಂದು ಸೇಡು ತೀರಿಸಿಕೊಳ್ಳುವುದಾಗಿ ಅಸ್ಕರ್ ಕೂಗಾಡಿದ್ದರು. ಸ್ನೇಹಿತರ ಬಳಿಯೂ ಆ ಬಗ್ಗೆ ಹೇಳಿಕೊಂಡಿದ್ದರು. ಈ ವಿಷಯ ಗೊತ್ತಾಗಿ ತಬ್ರೇಜ್ನೇ ತನ್ನ ಸಹಚರರ ಜೊತೆ ಸೇರಿ ಈ ಕೊಲೆ ಮಾಡಿರುವ ಅನುಮಾನವಿದೆ. ಆತ ತಲೆಮರೆಸಿಕೊಂಡಿದ್ದಾನೆ’ ಎಂದು ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೆ.ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ಅಸ್ಕರ್ (20) ಎಂಬುವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.</p>.<p>‘ಸ್ಥಳೀಯ ನಿವಾಸಿಯಾದ ಅಸ್ಕರ್ ಕೆಲಸ ಮುಗಿಸಿ ಮನೆಗೆ ಹೊರಟಿದ್ದಾಗಲೇ ಅಡ್ಡಗಟ್ಟಿ ದಾಳಿ ಮಾಡಿದ್ದ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ರಕ್ತದ ಮಡುವಿನಲ್ಲಿದ್ದ ಅಸ್ಕರ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಅವರು ಅಸುನೀಗಿದ್ದಾರೆ’ ಎಂದು ಪೊಲೀಸರು ಹೇಳಿದರು.</p>.<p>‘ಕೊಲೆಯಾದ ಅಸ್ಕರ್ ಹಾಗೂ ಸ್ಥಳೀಯ ನಿವಾಸಿ ತಬ್ರೇಜ್ ಎಂಬಾತನ ನಡುವೆ ಇತ್ತೀಚೆಗಷ್ಟೇ ಜಗಳ ಆಗಿತ್ತು. ತಬ್ರೇಜ್, ಅಸ್ಕರ್ ಕಪಾಳಕ್ಕೆ ಹೊಡೆದಿದ್ದ. ಸ್ಥಳೀಯರು ಜಗಳ ಬಿಡಿಸಿದ್ದರು.’</p>.<p>‘ಕಪಾಳಕ್ಕೆ ಹೊಡೆದ ತಬ್ರೇಜ್ ನನ್ನು ಕೊಂದು ಸೇಡು ತೀರಿಸಿಕೊಳ್ಳುವುದಾಗಿ ಅಸ್ಕರ್ ಕೂಗಾಡಿದ್ದರು. ಸ್ನೇಹಿತರ ಬಳಿಯೂ ಆ ಬಗ್ಗೆ ಹೇಳಿಕೊಂಡಿದ್ದರು. ಈ ವಿಷಯ ಗೊತ್ತಾಗಿ ತಬ್ರೇಜ್ನೇ ತನ್ನ ಸಹಚರರ ಜೊತೆ ಸೇರಿ ಈ ಕೊಲೆ ಮಾಡಿರುವ ಅನುಮಾನವಿದೆ. ಆತ ತಲೆಮರೆಸಿಕೊಂಡಿದ್ದಾನೆ’ ಎಂದು ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>