ಬೆಂಗಳೂರು: ಕುಡಿದ ಅಮಲಿನಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಸ್ನೇಹಿತರ ನಡುವೆ ಜಗಳವಾಗಿದ್ದು, ಮಣಿ ಎಂಬುವರನ್ನು ಕೊಲೆ ಮಾಡಲಾಗಿದೆ.
‘ಕೆಂಗೇರಿ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ಕೃತ್ಯ ಎಸಗಿರುವ ಸ್ನೇಹಿತರು ಸ್ಥಳದಿಂದ ಪರಾರಿಯಾಗಿದ್ದಾರೆ’ ಎಂದು ಪೊಲೀಸರು ಹೇಳಿದರು.
‘ಸ್ಥಳೀಯ ನಿವಾಸಿಯಾದ ಮಣಿ ಹಾಗೂ ಸ್ನೇಹಿತರು ಮದ್ಯದ ಪಾರ್ಟಿ ಮಾಡಲೆಂದು ಕೊಠಡಿಯೊಂದಕ್ಕೆ ಹೋಗಿದ್ದರು. ಅಲ್ಲಿ ಅವರೆಲ್ಲ ಮದ್ಯ ಕುಡಿದಿದ್ದರು. ಇದೇ ಸಂದರ್ಭದಲ್ಲೇ ಮಾತಿಗೆ ಮಾತು ಬೆಳೆದು ಜಗಳ ಶುರುವಾಗಿತ್ತು.’
‘ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಮಣಿ ಮೇಲೆ ದಾಳಿ ಮಾಡಿದ್ದ ಆರೋಪಿಗಳು ಕೊಲೆ ಮಾಡಿದ್ದರು. ತೀವ್ರ ರಕ್ತಸ್ರಾವದಿಂದ ಮಣಿ ಸ್ಥಳದಲ್ಲಿ ಅಸುನೀಗಿದ್ದಾರೆ’ ಎಂದೂ ಪೊಲೀಸರು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.