‘ಕೊಲೆ, ಕೊಲೆ ಯತ್ನ, ಸುಲಿಗೆ ಸೇರಿದಂತೆ 10ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಸುಬ್ರಹ್ಮಣ್ಯ, ಹಲವು ಬಾರಿ ಜೈಲಿಗೂ ಹೋಗಿ ಬಂದಿದ್ದ. ಆರೋಪಿ ಗಜ ಜೊತೆ ಗಲಾಟೆ ಮಾಡಿಕೊಂಡಿದ್ದ. ಗಜನನ್ನು ಹೊಡೆಯುವುದಾಗಿ ಸುಬ್ರಹ್ಮಣ್ಯ, ಸ್ನೇಹಿತರ ಬಳಿ ಹೇಳಿ
ಕೊಂಡು ಓಡಾಡುತ್ತಿದ್ದ. ಅದು ಗೊತ್ತಾಗುತ್ತಿದ್ದಂತೆ ಆರೋಪಿ ಗಜ, ತನ್ನ ಸಹಚರರ ಜೊತೆ ಸೇರಿ ಈ ಕೊಲೆ ಮಾಡಿದ್ದಾನೆ. ಈ ಬಗ್ಗೆ
ಆತ ತಪ್ಪೊಪ್ಪಿಕೊಂಡಿದ್ದಾನೆ. ಪ್ರಕರಣದಲ್ಲಿ ಮತ್ತಷ್ಟು ಆರೋಪಿಗಳು ಶಾಮೀಲಾಗಿದ್ದು, ಅವರು ತಲೆಮರೆಸಿಕೊಂಡಿದ್ದಾರೆ’ ಎಂದೂ ಪೊಲೀಸರು ಹೇಳಿದರು.