‘ಶನಿವಾರ ವಾಪಸ್ ರೂಂಗೆ ಬಂದು ಆಕೆಯನ್ನು ಹೋಟೆಲ್ಗೆ ಕರೆದೊಯ್ದು ಬೆಳಿಗ್ಗೆ ಇಬ್ಬರೂ ತಿಂಡಿ ಮಾಡಿದ್ದರು. ಮಧ್ಯಾಹ್ನವೂ ಹೋಟೆಲ್ನಲ್ಲಿ ಊಟ ಮಾಡಿ, ಜಯನಗರ, ಜೆ.ಪಿ.ನಗರದ ಉದ್ಯಾನಗಳಲ್ಲಿ ಸುತ್ತಾಡಿದ್ದರು. ಸಂಜೆ 7 ಗಂಟೆ ಸುಮಾರಿಗೆ ಜಯನಗರದ ಚಂದ್ರಗುಪ್ತ ಉದ್ಯಾನದ ಬಳಿ ಬಂದಾಗ ಮತ್ತೆ ಮದುವೆ ಆಗುವಂತೆ ಒತ್ತಾಯಿಸಿದ್ದ. ಆಗಲೂ ನಿರಾಕರಣೆ ಮಾಡಿದ್ದಕ್ಕೆ ಚಾಕುವಿನಿಂದ ಆಕೆಯ ಕತ್ತು ಕೊಯ್ದು ಕೊಲೆ ಮಾಡಿದ್ದಾನೆ. ಬಳಿಕ ಆತನೇ ಚಾಕು ಸಮೇತ ಠಾಣೆಗೆ ಬಂದು ಶರಣಾಗಿದ್ದಾನೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.