ಬೆಂಗಳೂರು: ರಾಜರಾಜೇಶ್ವರಿ ನಗರ ಠಾಣೆ ವ್ಯಾಪ್ತಿಯ ಜವರೇಗೌಡ ನಗರದಲ್ಲಿ ಹರ್ಷಿತಾ (32) ಎಂಬುವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಿಎಂಟಿಸಿ ಚಾಲಕನ ಪತ್ನಿಯಾಗಿದ್ದ ಹರ್ಷಿತಾ ತನ್ನ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದರು.
'ಚಿಕ್ಕಮಗಳೂರು ಜಿಲ್ಲೆ ಕಡೂರು ಪಟ್ಟಣದಲ್ಲಿ ದಂತವೈದ್ಯ ರೇವಂತ್ ಫೆಬ್ರವರಿ 17ರಂದು ಪತ್ನಿ ಕವಿತಾಳನ್ನ ಕೊಲೆ ಮಾಡಿದ್ದ. ಪೊಲೀಸರು ತನ್ನನ್ನು ಬಂಧಿಸುತ್ತಾರೆ ಎಂದು ಹೆದರಿ ಶನಿವಾರ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ.
ಅದರ ಬೆನ್ನಲ್ಲೇ ರೇವಂತ್ಗೆ ಪರಿಚಯವಿದ್ದ ಹರ್ಷಿತಾ ಸಹ ಆತ್ಮಹತ್ಯೆ ಮಾಡಿಕೊಂಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.