<p><strong>ಬೆಂಗಳೂರು</strong>: ಆರೋಗ್ಯ ವಿಚಾರಿಸಲು ಮನೆಗೆ ಬಂದಿದ್ದ ಬಾವನನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬ್ಯಾಟರಾಯನಪುರ ಠಾಣಾ ವ್ಯಾಪ್ತಿಯ ಹೊಸಗುಡ್ಡದ ಹಳ್ಳಿಯಲ್ಲಿ ಭಾನುವಾರ ರಾತ್ರಿ ನಡೆದಿದೆ.</p>.<p>ವೆಂಕಟಾಚಲಪತಿ (45) ಕೊಲೆಯಾದ ವ್ಯಕ್ತಿ. ಕೃತ್ಯ ಎಸಗಿದ ಬಾಮೈದ ವಿಶ್ವನಾಥ (45) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.</p>.<p>‘ಮಲ್ಲೇಶ್ವರದ ಉಪ ನೋಂದಣಿ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕನಾಗಿರುವ ವಿಶ್ವನಾಥ್, ಕೆಲವು ದಿನಗಳಿಂದ ಮಾನಸಿಕ ಖಿನ್ನತೆಗೊಳಗಾಗಿದ್ದರು. ಅಣ್ಣನ ಆರೋಗ್ಯದ ಕುರಿತು ತಂಗಿ ಹಾಗೂ ಅವರ ಪತಿ ವೆಂಕಟಾಚಲಪತಿ ಕಾಳಜಿ ತೋರಿಸುತ್ತಿದ್ದರು. ಭಾನುವಾರ ರಾತ್ರಿ 9 ಗಂಟೆ ಸುಮಾರಿಗೆ ಆರೋಗ್ಯ ವಿಚಾರಿಸಿ, ಔಷಧಿ ಕೊಟ್ಟು ಹೋಗಲು ಇಬ್ಬರೂ ಆರೋಪಿಯ ಮನೆ ಬಳಿ ಬಂದಿದ್ದರು. ಈ ವೇಳೆ ಆರೋಪಿ ಚಾಕುವಿನಿಂದ ವೆಂಕಟಾಚಲಪತಿಗೆ ಇರಿದು ಕೊಲೆ ಮಾಡಿದ್ದಾನೆ. ಆರೋಪಿಯನ್ನು ಬಂಧಿಸಲಾಗಿದೆ’ ಎಂದು ಪಶ್ಚಿಮ ವಿಭಾಗದ ಡಿಸಿಪಿ ಎಸ್.ಗಿರೀಶ್ ಮಾಹಿತಿ ನೀಡಿದ್ದಾರೆ.</p>.<p>ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಬ್ಯಾಟರಾಯನಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಆರೋಗ್ಯ ವಿಚಾರಿಸಲು ಮನೆಗೆ ಬಂದಿದ್ದ ಬಾವನನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬ್ಯಾಟರಾಯನಪುರ ಠಾಣಾ ವ್ಯಾಪ್ತಿಯ ಹೊಸಗುಡ್ಡದ ಹಳ್ಳಿಯಲ್ಲಿ ಭಾನುವಾರ ರಾತ್ರಿ ನಡೆದಿದೆ.</p>.<p>ವೆಂಕಟಾಚಲಪತಿ (45) ಕೊಲೆಯಾದ ವ್ಯಕ್ತಿ. ಕೃತ್ಯ ಎಸಗಿದ ಬಾಮೈದ ವಿಶ್ವನಾಥ (45) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.</p>.<p>‘ಮಲ್ಲೇಶ್ವರದ ಉಪ ನೋಂದಣಿ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕನಾಗಿರುವ ವಿಶ್ವನಾಥ್, ಕೆಲವು ದಿನಗಳಿಂದ ಮಾನಸಿಕ ಖಿನ್ನತೆಗೊಳಗಾಗಿದ್ದರು. ಅಣ್ಣನ ಆರೋಗ್ಯದ ಕುರಿತು ತಂಗಿ ಹಾಗೂ ಅವರ ಪತಿ ವೆಂಕಟಾಚಲಪತಿ ಕಾಳಜಿ ತೋರಿಸುತ್ತಿದ್ದರು. ಭಾನುವಾರ ರಾತ್ರಿ 9 ಗಂಟೆ ಸುಮಾರಿಗೆ ಆರೋಗ್ಯ ವಿಚಾರಿಸಿ, ಔಷಧಿ ಕೊಟ್ಟು ಹೋಗಲು ಇಬ್ಬರೂ ಆರೋಪಿಯ ಮನೆ ಬಳಿ ಬಂದಿದ್ದರು. ಈ ವೇಳೆ ಆರೋಪಿ ಚಾಕುವಿನಿಂದ ವೆಂಕಟಾಚಲಪತಿಗೆ ಇರಿದು ಕೊಲೆ ಮಾಡಿದ್ದಾನೆ. ಆರೋಪಿಯನ್ನು ಬಂಧಿಸಲಾಗಿದೆ’ ಎಂದು ಪಶ್ಚಿಮ ವಿಭಾಗದ ಡಿಸಿಪಿ ಎಸ್.ಗಿರೀಶ್ ಮಾಹಿತಿ ನೀಡಿದ್ದಾರೆ.</p>.<p>ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಬ್ಯಾಟರಾಯನಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>