‘ಸಿದ್ದಾರ್ಥ ಲೇಔಟ್ ನಿವಾಸಿ ಮಹಮೂದ್, ಮೆಕ್ಯಾನಿಕ್ ಕೆಲಸ ಮಾಡಿಕೊಂಡಿದ್ದರು. ಗೆದ್ದಲಹಳ್ಳಿಯಲ್ಲಿ ಗ್ಯಾರೇಜ್ವೊಂದನ್ನು ಇಟ್ಟುಕೊಂಡಿದ್ದರು. ತಮ್ಮ ಮಗಳನ್ನು ನಜೀರ್ ಮಗನಿಗೆ ವಿವಾಹ ಮಾಡಿಕೊಟ್ಟಿದ್ದರು. ಶನಿವಾರ ರಾತ್ರಿ ಮಹಮೂದ್ ಗ್ಯಾರೇಜ್ನಲ್ಲಿ ಕೆಲಸ ಮಾಡುತ್ತಿದ್ದರು. 8.30ರ ಸುಮಾರಿಗೆ ಅಲ್ಲಿಗೆ ಹೋಗಿದ್ದ ನಜೀರ್, ಮಹಮೂದ್ ಜೊತೆ ಜಗಳ ತೆಗೆದಿದ್ದ. ಇಬ್ಬರ ನಡುವಣ ಗಲಾಟೆ ವಿಕೋಪಕ್ಕೆ ತಿರುಗಿತ್ತು. ಕುಪಿತಗೊಂಡ ನಜೀರ್, ದೊಣ್ಣೆಯಿಂದ ಮಹಮೂದ್ ತಲೆಗೆ ಬಲವಾಗಿ ಹೊಡೆದಿದ್ದ. ಸ್ಥಳದಲ್ಲೇ ಕುಸಿದು ಬಿದ್ದಿದ್ದ ಅವರನ್ನು ಕೂಡಲೇ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿತ್ತು. ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವ ವಿಷಯ ಖಚಿತಪಡಿಸಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ.