ಹೆಗ್ಗನಹಳ್ಳಿ ಎಂಟನೇ ಕ್ರಾಸ್ನ ಮನೆಯೊಂದರಲ್ಲಿ ಲಕ್ಷ್ಮಿ, ಅವರ ಪತಿ ಶಿವರಾಜ್ (44) ಹಾಗೂ ಮಗಳು ಚೈತ್ರಾ ವಾಸವಿದ್ದರು. ಅವರ ಮನೆಯಲ್ಲೇ ಬಾಡಿಗೆಗಿದ್ದ ರಂಗಧಾಮಯ್ಯ (37) ಎಂಬಾತನೇ ಮೂವರ ಮೇಲೂ ಮಾರಕಾಸ್ತ್ರಗಳಿಂದ ಹೊಡೆದಿದ್ದ. ಲಕ್ಷ್ಮಿ ಅವರು ಮನೆಯಲ್ಲೇ ಮೃತಪಟ್ಟಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಶಿವರಾಜ್ ಹಾಗೂ ಚೈತ್ರಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.