‘ಮತ್ತಿಕೆರೆ ನಿವಾಸಿ ಪ್ರತೀಕ್, ಮಾಂಸದಂಗಡಿ ನಡೆಸುತ್ತಿದ್ದರು. ತಲೆಗೆ ತೀವ್ರ ಪೆಟ್ಟಾಗಿ ಆಸ್ಪತ್ರೆಗೆ ದಾಖಲಾಗಿದ್ದ ವೇಳೆ ಚಿಕಿತ್ಸೆಗೆ ಸ್ಪಂದಿಸದೇ ಅವರು ತೀರಿಕೊಂಡಿದ್ದರು. ಅಪಘಾತದಿಂದ ಗಾಯಗೊಂಡಿದ್ದಾಗಿ ಆಸ್ಪತ್ರೆಯಲ್ಲಿ ನಮೂದಿಸಲಾಗಿತ್ತು. ಮರಣೋತ್ತರ ಪರೀಕ್ಷೆ ವರದಿ ಬಂದಾಗ, ಇದೊಂದು ಕೊಲೆ ಎಂಬುದು ಗೊತ್ತಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.