‘ಶುಕ್ರವಾರ ರಾತ್ರಿ ಮನೆಗೆ ನುಗ್ಗಿದ್ದ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಶನಿವಾರ ಬೆಳಿಗ್ಗೆ ಬಾಡಿಗೆದಾರರೊಬ್ಬರು ಯಶೋದಮ್ಮ ಅವರ ಮನೆಗೆ ಹೋಗಿದ್ದರು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಯಶೋದಮ್ಮ ಅವರನ್ನು ಕಂಡು ಚೀರಾಡಿದ್ದರು. ಸ್ಥಳೀಯರು, ಯಶೋದಮ್ಮ ಅವರನ್ನು ಆಸ್ಪತ್ರೆಗೆ ಸಾಗಿಸಿದ್ದರು. ತಪಾಸಣೆ ನಡೆಸಿದ್ದ ವೈದ್ಯರು, ಸ್ಥಳದಲ್ಲೇ ವೃದ್ಧೆ ಮೃತಪಟ್ಟಿರುವುದಾಗಿ ಹೇಳಿದ್ದರು.’