‘ಯಶವಂತಪುರದಲ್ಲಿ ಗಾರ್ಮೆಂಟ್ಸ್ ಉದ್ಯಮ ನಡೆಸುತ್ತಿದ್ದ ಶ್ರೀಧರ್, ಶನಿವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆನಾಗವಾರ ವರ್ತುಲ ರಸ್ತೆಯ ಬಳಿಯ ಸರ್ವಿಸ್ ರಸ್ತೆಯಲ್ಲಿ ಕಾರು ಚಲಾಯಿಸಿಕೊಂಡು ಹೋಗುತ್ತಿದ್ದರು. ಈ ವೇಳೆ ದುಷ್ಕರ್ಮಿಗಳು ಬೈಕ್ನಲ್ಲಿ ಕಾರನ್ನು ಹಿಂಬಾಲಿಸಿಕೊಂಡು ಹೋಗಿದ್ದಾರೆ. ಇದನ್ನು ಗಮನಿಸಿದ ಶ್ರೀಧರ್ ಕಾರನ್ನು ವೇಗವಾಗಿ ಚಲಾಯಿಸಿದ್ದಾರೆ. ಆದರೂ ಬಿಡದ ದುಷ್ಕರ್ಮಿಗಳು ಕಾರನ್ನು ಬೆನ್ನಟ್ಟಿದ್ದಾರೆ. ಇದನ್ನು ಕಂಡು ಗಾಬರಿಗೊಂಡ ಅವರು ಕಾರಿನಿಂದ ಇಳಿದು ಓಡಿಹೋಗಲು ಪ್ರಯತ್ನಿಸಿದ್ದಾರೆ. ಈ ವೇಳೆ ಮಾರಕಾಸ್ತ್ರಗಳಿಂದ ಹತ್ಯೆ ಮಾಡಿ ಅಲ್ಲಿಂದ ಪರಾರಿಯಾಗಿದ್ದಾರೆ. ಮೃತರ ಪತ್ನಿ ಠಾಣೆಗೆ ಬಂದು ದೂರು ನೀಡಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.