ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿನಲ್ಲಿ ಪೊಲೀಸ್ ಮಾಹಿತಿದಾರನ ಬರ್ಬರ ಹತ್ಯೆ

Last Updated 26 ಜನವರಿ 2020, 7:13 IST
ಅಕ್ಷರ ಗಾತ್ರ

ಬೆಂಗಳೂರು: ಪೊಲೀಸ್ ಮಾಹಿತಿದಾರನನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ ಘಟನೆ ಬಸವೇಶ್ವರ ನಗರ ಬಳಿಯ ಕಮಲಾನಗರದಲ್ಲಿ ಶನಿವಾರ ರಾತ್ರಿ ನಡೆದಿದೆ.

ಸಿದ್ದೇಶ್ವರ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಕೆಲಸ ಮಾಡುತ್ತಿದ್ದ ಪ್ರಭು ಅಲಿಯಾಸ್ ಅಪ್ಪು (27) ಕೊಲೆಯಾದ ದುರ್ದೈವಿ. ಬ್ಯಾಂಕ್ ನಲ್ಲಿ ಚೆಕ್ ಸಂಗ್ರಹಿಸುವ ಕೆಲಸವನ್ನು ಪ್ರಭು ಮಾಡುತ್ತಿದ್ದರು.

ಕಳ್ಳರ ಬಗ್ಗೆ ಪೊಲೀಸರಿಗೆ ಪ್ರಭು ಮಾಹಿತಿ ನೀಡುತ್ತಿದ್ದರು. ಎರಡು ಬಾರಿ ಕಳ್ಳರನ್ನು ರೆಡ್ ಹ್ಯಾಂಡ್ ಆಗಿ ಪ್ರಭು ಅವರು ಹಿಡಿದುಕೊಟ್ಟಿದ್ದರು. ಹೀಗಾಗಿಯೇ ಹಳೇ ದ್ವೇಷ ಹಿನ್ನಲೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ವೇಳೆ ಹಿಂಬಾಲಿಸಿಕೊಂಡು ಬಂದ ದುಷ್ಕರ್ಮಿಗಳು ಪ್ರಭು ಅವರಿಗೆ ಹಲವು ಬಾರಿ ಇರಿದಿದ್ದಾರೆ. ರಕ್ತಸ್ರಾವದಿಂದ ಪ್ರಭು ಸ್ಥಳದಲ್ಲೇಮೃತಪಟ್ಟರು ಎಂದು ಪೊಲೀಸರು ಹೇಳಿದರು.

ಪ್ರಕರಣ ದಾಖಲಿಸಿಕೊಂಡಿರುವ ಬಸವೇಶ್ವರ ನಗರ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT